ವಿಜಯನಗರವಾಣಿ ಸುದ್ಧಿ
ಬಳ್ಳಾರಿ ಜಿಲ್ಲೆ:
- ಹಗರಿಬೊಮ್ಮನಹಳ್ಳಿ:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಪಿಎಂಸಿ, ಭೂ ಸುಧಾರಣಾ, ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ನಡೆಸುತ್ತಿರುವ ಕರ್ನಾಟಕ ಬಂದ್ ಬೆಂಬಲಿಸಿ ರೈತ ಸಂಘಟನೆ, ದಲಿತ, ಕನ್ನಡಪರ, ಕಾರ್ಮಿಕ ಸಂಘಟನೆಗಳು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಾಥ್ ನೀಡಿ ಪಟ್ಟಣದ ಈಶ್ವರ ದೇವಸ್ಥಾನದಿಂದ ಬಸವೇಶ್ವರ ಸರ್ಕಲ್ ವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಯಿತು.ಪ
ಟ್ಟಣದಲ್ಲಿ ಬಹುತೇಕ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು ಬಂದ್ ಮಾಡಿ ವ್ಯಾಪಾರಸ್ಥರು ಹಾಗೂ ಬೀದಿಬದಿ ವ್ಯಾಪಾರಿಗಳು ಸಹ ಪ್ರತಿಭಟನೆಗೆ ಬೆಂಬಲ ನೀಡಿದರು. ಬಸವೇಶ್ವರ ವೃತ್ತದಲ್ಲಿ ವೇದಿಕೆ ನಿರ್ಮಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಸಂಘಟನೆಯ ಮುಖಂಡರು ವಾಗ್ದಾಳಿ ನಡೆಸಿದರು. ಶಾಸಕ ಎಸ್.ಭೀಮಾನಾಯ್ಕ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮತ್ತೊಂದೆಡೆ ಪಟ್ಟಣದ ಬಸವೇಶ್ವರ ಬಜಾರ್, ಕೂಡ್ಲಿಗಿ ರಸ್ತೆ, ಕೊಟ್ಟೂರು ರಸ್ತೆ ಹಾಗೂ ರಾಮನಗರದ ಪ್ರಮುಖ ಬೀದಿಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಸಾಥ್ ನೀಡಿದ್ದಾರೆ.