ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಕೊನೆಗೂ ದೂರು ದಾಖಲಿಸಿಕೊಂಡ ಪೊಲೀಸರು

Share and Enjoy !

Shares
Listen to this article

ವಿಜಯನಗರವಾಣಿ
ರಾಯಚೂರು ಜಿಲ್ಲೆ

ಲಿಂಗಸುಗೂರು : ಮಗುವಿನೊಂದಿಗೆ ಆಸ್ಪತ್ರೆಗೆ ಬರುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಸಮೀಪದ ಸರ್ಜಾಪುರ ಬಳಿ ನಿನ್ನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಾಗಿದೆ.
ನಿನ್ನೆ ಮಧ್ಯಾಹ್ನ ಎರಡೂವರೆ ಸುಮಾರಿಗೆ ಲಿಂಗಸುಗೂರು ಸಮೀಪದ ಸರ್ಜಾಪುರ ಬಳಿ ಬರುತ್ತಿದ್ದಾಗ ಖಾಸಗಿ ವಾಹನ ಚಾಲಕ ಮೂತ್ರ ವಿಸರ್ಜನೆ ನೆಪದಲ್ಲಿ ವಾಹನ ನಿಲ್ಲಿಸಿದ್ದಾನೆ. ಬಳಿಕ ಮಹಿಳೆ ಜೊತೆಗಿದ್ದ ಮಗುವನ್ನು ಕಸಿದುಕೊಂಡು ಜೋಳದ ಹೊಲದತ್ತ ಓಡಿದ್ದಾನೆ. ಆಗ ಮಗುವನ್ನು ಆತನಿಂದ ಬಿಡಿಸಿಕೊಳ್ಳಲು ತೆರಳಿದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ರಸ್ತೆಯಲ್ಲಿ ತೆರಳುತ್ತಿದ್ದ ಜನರು ರಕ್ಷಣೆ ಮಾಡಿದ್ದಾರೆ. ಬಳಿಕ ತಪ್ಪಿಸಿಕೊಂಡು ಬಂದಿದ್ದ ಚಾಲಕನನ್ನು ಜನರು ವಾಹನ ಸಮೇತ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಇದರಿಂದ ನೊಂದ ಮಹಿಳೆ ಪೋಲಿಸ್ ಠಾಣೆಗೆ ದೂರು ನಿಡಲು ಮುಂದಾದರು ಪೋಲಿಸರು ದೂರು ಸ್ವಿಕರಿಸುತ್ತಿಲ್ಲವೆಂದು ವಿಜಯನಗರವಾಣಿ ಯೊಂದಿಗೆ ತನ್ನ ಅಳಲನ್ನು ತೊಂಡಿಕೊಂಡಿದ್ದಳು
ಈ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಮಹಿಳೆ ಠಾಣೆಗೆ ಆಗಮಿಸಿದ್ದರು ಪ್ರಕರಣ ದಾಖಲಿಸಲು ಪೊಲೀಸರ ನಿರ್ಲಕ್ಷ್ಯ ಎಂಬ ಶೀರ್ಷೆಕಯಡಿ ಸುದ್ದಿ ಮಾಡಿತ್ತು.
ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಕೊನೆಗು ಮಹಿಳೆ ನೀಡಿದ ಆದರಾದ ಮೇಲೆ ಕ್ರಿಮಿನಲ್ ಮೊಕದ್ದಮೆಪ್ರಕರಣ ದಾಖಲಿಸಿದ್ದಾರೆ.
ಎಂದು ಗ್ರಾಮೀಣ ಕೂಲಿಕಾರರ ಸಂಘದ ತಾಲೂಕು ಅಧ್ಯಕ್ಷ ಗುಂಡಪ್ಪ ಯರಡೋಣಿ ಹೇಳಿಕೊಂಡಿದ್ದಾರೆ.

Share and Enjoy !

Shares