ಬಸ್ ಸಿಲುಕಿಕೊಂಡು ಹಂಪಿ ಸ್ಮಾರಕಕ್ಕೆ ಧಕ್ಕೆ

Share and Enjoy !

Shares
Listen to this article

ವಿಜಯನಗರವಾಣಿ
ಹೊಸಪೇಟೆ: ವಿಶ್ವ ವಿಖ್ಯಾತ ಹಂಪಿಯ ವಿಜಯ ವಿಠಲ ದೇವಸ್ಥಾನಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿನ ಮಂಟಪದೊಳಗೆ ಬೃಹತ್ ಗಾತ್ರದ ಬಸ್ ಸಿಲುಕಿಕೊಂಡು, ಸ್ಮಾರಕಕ್ಕೆ ಹಾನಿಯಾದ ಘಟನೆ ನಡೆದಿದೆ.
ವಿಜಯವಿಠ್ಠಲ ದೇವಸ್ಥಾನವನ್ನು ವೀಕ್ಷಣೆ ಮಾಡಲು ತೆರಳುವಾಗ ಬಸ್ ಸಿಲುಕಿಕೊಂಡಿದ್ದು, ಕೆಲ ಕಾಲ ಸಂಚಾರಕ್ಕೆ ತೊಂದರೆಯಾಗಿದೆ. ಈ ಮಾರ್ಗವಾಗಿ ಬಸ್ ಸಂಚಾರಕ್ಕೆ ಅವಕಾಶ ನೀಡಬಾರದು ಎಂದು ಸ್ಥಳೀಯರು ಆಗ್ರಹಿಸಿದರು.
ಈ ಸಂಬಂಧ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸರ್ವೇಕ್ಷಣ ಇಲಾಖೆಯ ಡೆಪ್ಯುಟಿ ಸೂಪರಿಟೆಂಡೆಂಟ್ ಪಿ. ಕಾಳಿ ಮುತ್ತು ಮಾತನಾಡಿ, ರಜೆಯಲ್ಲಿರುವೆ. ಹಾಗಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವೆ. ಬಳಿಕ ಈ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share and Enjoy !

Shares