ವಿಜಯನಗರವಾಣಿ ಸುದ್ದಿ
ರಾಯಚೂರು ಜಿಲ್ಲೆ
ಲಿಂಗಸಗೂರು: ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸುಕ್ಷೇತ್ರ ಅಂಕಲಿಮಠ (ತಲೆಕಟ್ಟು)ದಲ್ಲಿ ಜೂನ್ 2 ರಂದು ನಡೆಯಬೇಕಾಗಿದ್ದ ಶ್ರೀ ಸದ್ಗುರು ನಿರುಪಾಧೀಶ್ವರ ಮಹಾ ರಥೋತ್ಸವ ವನ್ನು , ಕೊರೋನಾ ಹೆಚ್ಚಾದ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ.ಎಂದು ಶ್ರೀ ಮಠದ ಪೂಜ್ಯರಾದ ಶ್ರೀ ವೀರಭದ್ರ ಮಹಾ ಸ್ವಾಮಿಗಳು ಸುಕ್ಷೇತ್ರ ಅಂಕಲಿಮಠ ರವರು, ಶ್ರೀ ಮಠದ ಭಕ್ತರಿಗೆ ತಿಳಿಸಿದ್ದಾರೆ.ಜೂನ್ 1 ಮತ್ತು2 ರಂದು ಸಾಂಕೇತಿಕ ವಾಗಿ ಶ್ರೀ ಮಠದ ಅರ್ಚಕರು ಸದ್ಗುರು ನಿರುಪಾಧೀಶ್ವರ ಕತೃ ಗದ್ದುಗೆ ಪೂಜೆ ಸಲ್ಲಿಸುವರು ಎಂದು ತಿಳಿಸಿದ್ದಾರೆ.
ಕೊರೋನಾಹೆಚ್ಚಾದ ಹಿನ್ನೆಲೆಯಲ್ಲಿ ಜಾತ್ರೆಯ ನ್ನು ರದ್ದು ಮಾಡಿದ ಕಾರಣ ಶ್ರೀ ಮಠದ ಭಕ್ತರು ತಮ್ಮ ತಮ್ಮ ಮನೆಯಲ್ಲಿ ಪೂಜೆ ಸಲ್ಲಿಸುವದರ ಮೂಲಕ ಸದ್ಗರುವಿನ ಆಶೀರ್ವಾದ ಪಡೆದುಕೊಳ್ಳಬೇಕು. ಎಂದು ಪೂಜ್ಯರು ತಿಳಿಸಿದ್ದಾರೆ.ಎಲ್ಲರೂ ಸಾಮಾಜಿಕ ಅಂತರ ಕಾಯ್ದು ಕೊಂಡು ಮಾಸ್ಕ್ ಧರಿಸಿ,ಹಾಗೂ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳುವುದರ ಮೂಲಕ ಕೊರೋನಾ ದಿಂದ ಮುಕ್ತ ರಾಗಬೇಕು ಎಂದು ಪೂಜ್ಯರು ಸಂದೇಶ ನೀಡಿದ್ದಾರೆ.ಆದ ಕಾರಣ ತಾವೆಲ್ಲರೂ ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ನಾವು ನೀವೆಲ್ಲರೂ ಪಾಲಿಸೋಣ ಎಂದು ಹೇಳಿದರು.