ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್ ಸಿಂಗ್ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ

Share and Enjoy !

Shares

ವಿಜಯನಗರ ವಾಣಿ

ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್ ಸಿಂಗ್ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ, ಬಿಎಸ್‌ವೈ ಭೇಟಿ ನಂತರ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ ಆನಂದ್ ಸಿಂಗ್‌.

ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಖಾತೆಯಿಂದ ಅಸಮಾಧಾನಗೊಂಡಿರುವ ಆನಂದ್ ಸಿಂಗ್ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿತ್ತು. ಆದರೆ, ಅವರನ್ನು ಮನವೊಲಿಸಲು ಸಿಎಂ ಬಸವರಾಜ ಬೊಮ್ಮಾಯಿ ಪ್ರಯತ್ನ ನಡೆಸಿದ್ದರು. ಆದರೆ ಇದು ಯಶಸ್ವಿ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ಬೊಮ್ಮಾಯಿ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದರು.

ಈ ಬೆಳವಣಿಗೆ ನಡುವೆ ಶಾಸಕ ಹಾಗೂ ಯಡಿಯೂರಪ್ಪ ಆಪ್ತ ರಾಜೂಗೌಡ ಅವರು ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಅವರನ್ನು ಬೆಂಗಳೂರಿಗೆ ಕರೆತರಲು ಯಶಸ್ವಿ ಆಗಿದ್ದಾರೆ. ಆದರೆ ಆನಂದ್ ಸಿಂಗ್ ನೇರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡದೆ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ್ದಾರೆ.

ಆನಂದ್ ಸಿಂಗ್ ಗೆ ಶಾಸಕ ರಾಜೂಗೌಡ ಸಾಥ್ ನೀಡಿದ್ದು, ಒಂದೇ ಕಾರಿನಲ್ಲಿ ಆಗಮಿಸಿದ ಆನಂದ್ ಸಿಂಗ್ ಹಾಗೂ ರಾಜುಗೌಡ ಆಗಮಿಸಿದ್ದಾರೆ. ಸದ್ಯ ಆನಂದ್ ಸಿಂಗ್ ಅವರು ಯಡಿಯೂರಪ್ಪ ಜೊತೆ ಮಾತುಕತೆ ನಡೆಸುತ್ತಿದ್ದಾರೆ.‌ ಬಳಿಕ‌ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಿದ್ದಾರೆ.

ಆನಂದ್ ಸಿಂಗ್ ಮನವೊಲಿಕೆಗೆ ಬಿಎಎಸ್‌ವೈ ಪ್ರಯತ್ನ
ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಆನಂದ್ ಸಿಂಗ್ ಅವರನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮನವೊಲಿಕೆ ಮಾಡುತ್ತಿದ್ದಾರೆ.

ಸದ್ಯದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಇರುವ ಖಾತೆಯಲ್ಲಿ ಮುಂದುವರಿಯಿರಿ. ಈ ಸ್ಥಿತಿಯಲ್ಲಿ ಖಾತೆ ಬದಲಾವಣೆಗೆ ಪಟ್ಟು ಹಿಡಿದಲ್ಲಿ ಮತ್ತಷ್ಟು ಗೊಂದಲ ಸೃಷ್ಟಿಗೆ ಕಾರಣವಾಗುತ್ತದೆ. ಪ್ರವಾಸೋದ್ಯಮ ಖಾತೆ ಉತ್ತಮವಾಗಿದ್ದು, ಅದರಲ್ಲಿ ಮುಂದುವರಿಯಿರಿ ಎಂದು ಮನವೊಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಆನಂದ್ ಸಿಂಗ್ ಈ ಮನವೊಲಿಕೆಗೆ ಎಷ್ಟರ ಮಟ್ಟಿಗೆ ಒಪ್ಪುತ್ತಾರೆ ಎಂಬುವುದನ್ನು ಕಾದು ನೋಡಬೇಕಿದೆ.‌

ಸದ್ಯ ಸಿಎಂ ಬಸವರಾಜ ಬೊಮ್ಮಾಯಿ ಕೃಷ್ಣಾದಲ್ಲಿ ಸಭೆ ನಡೆಸುತ್ತಿದ್ದಾರೆ. ಬುಧವಾರ ಸಂಜೆ ನಂತರ ಆನಂದ್‌ ಸಿಂಗ್‌ ಅವರು ಬೊಮ್ಮಾಯಿ ಅವರನ್ನು ಭೇಟೆಯಾಗುವ ಸಾಧ್ಯತೆ ಇದೆ.

Share and Enjoy !

Shares