ʼಪಂಚಮಸಾಲಿಗಳು ತಮ್ಮನ್ನು ಒಬಿಸಿ ಪಟ್ಟಿಗೆ ಸೇರಿಸುವಂತೆ ಬ್ಲಾಕ್‌ಮೇಲ್‌ ಮಾಡಬಾರದುʼ: ಜಿ ಪರಮೇಶ್ವರ್‌

Share and Enjoy !

Shares
Listen to this article

ವಿಜಯನಗರ ವಾಣಿ

ಪಂಚಮಸಾಲಿಗಳು ತಮ್ಮನ್ನು ಒಬಿಸಿ ಪಟ್ಟಿಗೆ ಸೇರಿಸುವಂತೆ ಬ್ಲಾಕ್‌ಮೇಲ್‌ ಮಾಡಬಾರದು. ಸೆಪ್ಟೆಂಬರ್‌ ಒಳಗಡೆ ಒಬಿಸಿ ಪಟ್ಟಿಗೆ ಸೇರಿಸಿ ಎನ್ನುವುದು ಬ್ಲಾಕ್‌ಮೇಲ್‌ ಆಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದ್ದಾರೆ.

ತುಮಕೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರೂ ಬ್ಲಾಕ್‌ಮೇಲ್‌ ಮಾಡಲು‌ ಹೋದರೆ ಸಂವಿಧಾನಕ್ಕೆ ಬೆಲೆ ಇರಲ್ಲ. ಕಾನೂನಿಗೂ ಬೆಲೆ ಇರಲ್ಲ. ಅದೇ ರೀತಿ ಜನರ ಒತ್ತಾಯ ತಡೆದುಕೊಳ್ಳುವ ಶಕ್ತಿ ಸರ್ಕಾರಕ್ಕೆ ಇರಬೇಕು ಎಂದರು.

ಒಬಿಸಿ ವರ್ಗಗಳ ಪಟ್ಟಿ ಸಿದ್ದತೆ ನಿರ್ಧಾರ ಅಧಿಕಾರ ರಾಜ್ಯಕ್ಕೆ ಕೊಟ್ಟಿರೋದು ಸ್ವಾಗತಾರ್ಹ. ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಇದ್ದಾಗಲೂ ಈ ಪ್ರಸ್ತಾವನೆ ಇತ್ತು. ಒಂದೊಂದು ರಾಜ್ಯದಲ್ಲಿ ಒಂದೊಂದು ಸಮುದಾಯಗಳು ಬೇರೆ ಬೇರೆ ಹೆಸರಿಟ್ಟು ಕೊಂಡಿವೆ. ಅಂಥವರಿಗೆ ಒಬಿಸಿ ಪಟ್ಟಿಯಲ್ಲಿ ಸೇರಿಸಿಲು ಗೊಂದಲ ವಾಗುತಿತ್ತು. ರಾಜ್ಯ ಸರ್ಕಾರಕ್ಕೆ ಈ ಅಧಿಕಾರ ಕೊಟ್ಟಿರೋದು ಒಳ್ಳೆ ಬೆಳವಣಿಗೆ ಎಂದು ಹೇಳಿದರು.

ಇನ್ನು, ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯ ಕೊಟ್ಯಂತರ ರೂಪಾಯಿ ಹಣವನ್ನು ಸರ್ಕಾರ ಬಾಕಿ ಉಳಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಗಳಿಗೆ ಫಲಾನುಭವಿಗಳ ಹಣ ಬಿಡುಗಡೆ ಮಾಡದೇ ಸತಾಯಿಸುತ್ತಿದೆ. ಜನಗಳಿಗೆ ಉಪಯೋಗ ಮಾಡಲು ಹೋಗಿ ಖಾಸಗಿ ಆಸ್ಪತ್ರೆಗಲು ಮುಚ್ಚುವ ಹಂತಕ್ಕೆ ತಲುಪಿದೆ. ಕಳೆದ 7-8 ತಿಂಗಳಿಂದ ಆರೋಗ್ಯ ಕಾರ್ಡ್ ಹಣ ಸರ್ಕಾರ ಬಿಡುಗಡೆ ಮಾಡಿಲ್ಲ. ಈ ಕೂಡಲೇ ಸರ್ಕಾರ ಖಾಸಗಿ ಆಸ್ಪತ್ರೆಗಳ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ದೇವೇಗೌಡರ ಮನೆಗೆ ಭೇಟಿ ನೀಡಿರುವುದು ಸಹಜ. ಅದಕ್ಕೆ ಬೇರೆ ಅರ್ಥ ಕಲ್ಪಿಸಿದರೆ ನಾವು ಸಣ್ಣವರಾಗುತ್ತೇವೆ. ದೇವೇಗೌಡರು ಹಲವು ಸಂದರ್ಭಗಳಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಮಾರ್ಗದರ್ಶನ ಮಾಡುತ್ತಾರೆ. ನಾವು ಉನ್ನತ ಹುದ್ದೆಗೆ ಹೋದಾಗ ಆ ಕ್ಷೇತ್ರದ ಹಿರಿಯರನ್ನ ಭೇಟಿ ಮಾಡೋದು ಒಂದು ಸಂಪ್ರದಾಯ ಎಂದು ಪರಮೇಶ್ವರ್‌ ವ್ಯಾಖ್ಯಾನಿಸಿದರು.

ಇನ್ನು, ಅವಾಚ್ಯ ಶಬ್ಧ ಬಳಸಿರುವ ಸಚಿವ ಕೆಎಸ್‌ ಈಶ್ವರಪ್ಪ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಯಾಕೆ ಹೀಗೆ ಮಾಡುತ್ತಾರೋ ಗೊತ್ತಿಲ್ಲ. ಅವರು ನಡವಳಿಕೆ ಸರಿಪಡಿಸಿಕೊಳ್ಳಬೇಕು.ಉಪ ಮುಖ್ಯಮಂತ್ರಿ ಆಗಿ ಕೆಲಸ ಮಾಡಿದವರು ಈ ರೀತಿ ಮಾತಾಡಬಾರದು. ಇಂಥ ಭಾಷೆ ಉಪಯೋಗ ಸರಿಯಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Share and Enjoy !

Shares