2021 ರ ಮುಂಗಾರು ಋತುವಿನ ಜುಲೈ ಮಾಹೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿದ್ದಂತಹ ಮಹಾ ಮಳೆಗೆ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿನ ಕೃಷಿ ಕಣಿವ ಜಲಾಶಯಗಳು ತುಂಬಿ ಹರಿದ ನೀರಿನಿಂದ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಮತ್ತು ಇದೇ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿಯೂ ಸಹ ಪ್ರವಾಹ ಪರಿಸ್ಮಿತಿ ಉಂಟಾಗಿರುವುದರಿಂದ ಅಪಾರ ಪ್ರಮಾಣದಲ್ಲಿ ಜಿವಹಾನಿ , ಮನೆ ಹಾನಿ , ಬೆಳೆ ಹಾನಿ ಹಾಗೂ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಹಾನಿಯಾಗಿರುತ್ತದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳಲ್ಲಿ ಅತಿವೃಷ್ಟಿ ಹಾಗೂ ನದಿಗಳು ಉಕ್ಕಿ ಹರಿದಿರುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದೆ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನಾಧರಿಸಿ ಜುಲೈ 2021 ರ ಮಾಹೆಯಲ್ಲಿ ಅತಿವೃಷ್ಟಿ ಪ್ರವಾಹ ಎದುರಿಸಿದ 13 ಜಿಲ್ಲೆಗಳ 61 ಶಾಲ್ಲೂಕುಗಳನ್ನು ‘ಅನಿವ್ರ ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಲು ನಿರ್ಧರಿಸಿ ಈ ಕೆಳಕಂಡಂತೆ ಆದೇಶಿಸಿದೆ ಸರ್ಕಾರದ ಆದೇಶ ಸಂಖ್ಯೆ ಕಂ ಇ 336 ಟಿಎನ್ಆರ್ 2021 ಬೆಂಗಳೂರು ದಿನಾಂಕ : 11-08-2021 ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ 2021 ನೇ ಸಾಲಿನ ಮುಂಗಾರು ಋತುವಿನ ಜುಲೈ ಮಾಹಯಲ್ಲಿ ಅತಿವೃಷ್ಟಿ ಹಾಗೂ ನದಿ ಹರಿವಿನಿಂದ ಪ್ರವಾಹ ಉಂಟಾಗಿದ್ದು ಅಪಾರ ಪ್ರಮಾಣದಲ್ಲಿ ಜೀವ ಹಾನಿ ಮನ ಹಾನಿ ಬೆಳಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನಲೆಯಲ್ಲಿ ಅನುಬಂಧದಲ್ಲಿ ನಮೂದಿಸಿರುವ ರಾಜ್ಯದ 13 ಜಿಲ್ಲೆಗಳ 61 ತಾಲ್ಲೂಕುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ” ಅತಿವೃಷ್ಟಿ ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ .
ಅತಿವೃಷ್ಟಿ ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಿದ ತಾಲೂಕುಗಳಲ್ಲಿ SDRE / NDRF ಮಾರ್ಗಸೂಚಿ ಪ್ರಕಾರ ಹಾಗೂ ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಕಾಲ ಕಾಲಕ್ಕೆ ಹೊರಡಿಸಲಾದ ಸರ್ಕಾರದ ಆದೇಶ ಸುತ್ತೋಲೆಗಳಲ್ಲಿನ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಜಿಲ್ಲಾಡಳಿತವು ಅಗತ್ಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರವು ಆದೇಶಿಸಿದೆ . ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ Rashmi M.S. ( ರಶಿ ಎಂ.ಎಸ್ . ) 1 & / hoyi . ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಮತ್ತು ಸೇವೆಗಳು ಇವರಿಗೆ : ಸಂಕಲನಕಾರರು , ಕರ್ನಾಟಕ ರಾಜ್ಯಪತ್ರ , ವಿಕಾಸಸೌಧ , ಬೆಂಗಳೂರು – ಈ ಆದೇಶವನ್ನು ಕೂಡಲೇ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಲು ಕೋರಿದೆ . ಪ್ರತಿ : 1 ) ಮಹಾಲೇಖಪಾಲರು , ಕರ್ನಾಟಕ , ಬೆಂಗಳೂರು . 2 ) ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿಗಳು ,