ಮಸ್ಕಿ ತಾಲೂಕಿನ ಸಂತೆಕಲ್ಲೂರು ಗ್ರಾಮದಲ್ಲಿ ಮೊಹರಂ ಹಬ್ಬದ ನಿಮಿತ್ಯ ಕೊನೆಯ ದಿನವಾದ ಇಂದು ದೇವರ ಮೆರವಣಿಗೆ ಸಮಯದಲ್ಲಿ ವಿದ್ಯುತ್ ಶಾಟ್ ನಿಂದಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ನಡೆದಿದೆ .
ಪೀರಾ ದೇವರು ಹಿಡಿದ ಹುಸೇನ್ ಸಾಬ್ (55) ವರ್ಷ ಹಾಗೂ ನಮಸ್ಕಾರ ಮಾಡಲು ಬಂದಿದ್ದ ಹುಲಿಗೆಮ್ಮ (23) ವರ್ಷ ಎಂಬ ಇಬ್ಬರು ಮೃತಪಟ್ಟಿದ್ದಾರೆ. ಎಂದು ತಿಳಿದು ಬಂದಿದೆ. ಇನ್ನುಳಿದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.