ವಿಜಯನಗರ ವಾಣಿ ಸುದ್ದಿ
ಕೊಟ್ಟೂರು : ನೀತಿ ಸಂಹಿತೆ ಜಾರಿಯಾದ ದಿನವೇ ಕೊಟ್ಟೂರು ತಾಲೂಕಿನ ಹರಾಳು ಕ್ರಾಸ್ ನಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ನಲ್ಲಿ ₹ 3.80.000 ಲಕ್ಷ ರೂಪಾಯಿಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ ಎಸ್ ಟಿ ಸಿಬ್ಬಂದಿ ಹಾಗು ಪೋಲೀಸ್ ಸಿಬ್ಬಂದಿ ರವರು ವಾಹನಗಳ ಪರಿಶೀಲನೆ ಮಾಡುತ್ತಿದ್ದಾಗ ಹರಪನಹಳ್ಳಿಯಿಂದ ಕೊಟ್ಟೂರು ಕಡೆ ಹೋಗುತ್ತಿದ್ದ ಚಂದ್ರನಾಯ್ಕ ವಾಹನದಲ್ಲಿ ಪತ್ತೆಯಾಗಿದ್ದು ಸೂಕ್ತ ದಾಖಲೆಗಳು ಇಲ್ಲದೇ ಇರುವುದರಿಂದ ಕೊಟ್ಟೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಪರಿಶೀಲನೆಗಾಗಿ ಜಿಲ್ಲಾ ವೆಚ್ಚ ನಿರ್ವಹಣಾ ಸಮಿತಿಗೆ ವರದಿ ಸಲ್ಲಿಸಲಾಗಿದೆ. ಎಂದು ತಿಳಿದು ಬಂದಿದೆ.