ಮೈಸೂರಿನಲ್ಲಿ ಅದ್ಧೂರಿ ಕೆಂಪೇಗೌಡ ಜಯಂತಿ ಆಚರಣೆ

Share and Enjoy !

Shares
Listen to this article

ಮೈಸೂರು: ಪ್ರತಿ ವರ್ಷ ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಆಚರಿಸಲಾಗುತ್ತೆ. ಅದರಂತೆ ಇಂದು ಮೈಸೂರು ಜಿಲ್ಲೆಯಲ್ಲಿ ಬೆಂಗಳೂರು ಸೃಷ್ಟಿಕರ್ತ ಕೆಂಪೇಗೌಡರ 514ನೇ ಜಯಂತಿಯನ್ನು ಆಚರಿಸಲಾಗಿದೆ. ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದಅದ್ಧೂರಿ ಮೆರವಣಿಗೆ ಆರಂಭವಾಗಿ ಕಲಾಮಂದಿರದ ಬಳಿ ಮುಗಿಸಲಾಗಿದೆ. ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್.ಸಿ‌. ಮಹದೇವಪ್ಪ, ಸಂಸದ ಪ್ರತಾಪಸಿಂಹ, ಶಾಸಕರಾದ ಜಿ.ಟಿ. ದೇವೇಗೌಡ, ಪುತ್ರ ಶಾಸಕ ಹರೀಶ್ ಗೌಡ ಸೇರಿಹಲವರು ಭಾಗಿಯಾಗಿದ್ದರು.

ನಾಡಪ್ರಭು ಕೆಂಪೇಗೌಡರ ಮೂರ್ತಿಮೆರವಣಿಗೆ ನಡೆಯುತ್ತಿದ್ದ ವೇಳೆ ಕಲಾ ತಂಡಗಳು ಜಾನಪದ ಕಲೆ ಪ್ರದರ್ಶಿಸಿದವು. ಡಿಜೆ ಹಾಡಿಗೆ ಯುವಕರು ಕುಣಿದು ಕುಪ್ಪಳಿಸಿದ್ದರು. ಇನ್ನು ಕಾರ್ಯಕ್ರಮದಲ್ಲಿ ಸಂಸದ ಪ್ರತಾಪಸಿಂಹನನ್ನು ಸಚಿವ ಡಾ ಎಚ್.ಸಿ. ಮಹದೇವಪ್ಪ ತಬ್ಬಿಕೊಂಡ ಘಟನೆಯೂ ನಡೆಯಿತು. ಅರಮನೆಯಿಂದ ಪ್ರಮುಖರಸ್ತೆಗಳಲ್ಲಿ ಸಾಗಿದ ಮೆರವಣಿಗೆ ಕಲಾಮಂದಿರದ ಬಳಿ ಕೊನೆಯಾಯ್ತು.

Share and Enjoy !

Shares