ರಾಯಚೂರು: ಜುಲೈ 12ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 61 ಹುಟ್ಟುಹಬ್ಬದ ಸಂದರ್ಭವಾಗಿ ಡಾಕ್ಟರ್ ಪುನೀತ್ ರಾಜಕುಮಾರ್ (ಅಪ್ಪು) ಚಾರಿಟೇಬಲ್ ಟ್ರಸ್ಟ್ ರಾಯಚೂರು ವತಿಯಿಂದ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೈಲಾರ ನಗರದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಬುಕ್ ಮತ್ತು ಪೆನ್ ವಿತರಣೆ ಮಾಡಲಾಯಿತು
ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಸಾದಿಕ್ ಖಾನ್, ಬಿ. ಸುರೇಶ, ನಸೀರ್, ತಿಮ್ಮ ರೆಡ್ಡಿ, ಜಿಲನ್, ಉಸ್ಮಾನ್, ನರಸ ರೆಡ್ಡಿ, ಸಾಗರ ಮತ್ತಿತರರು ಉಪಸ್ಥಿತರಿದ್ದರು