76ನೇ ಸ್ವಾತಂತ್ರ್ಯ ದಿನಾಚರಣೆ: 1800 ಗಣ್ಯರಿಗೆ ಆಹ್ವಾನ

Share and Enjoy !

Shares
Listen to this article

ನವದೆಹಲಿ:- ದೇಶದ 76ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ಈ ಬಾರಿ ಸಾರ್ವಜನಿಕರು ಹೆಚ್ಚು ಹೆಚ್ಚು ಭಾಗವಹಿಸಬೇಕೆಂಬ ಕಾರಣಕ್ಕಾಗಿ ದೇಶಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 1800 ಮಂದಿ ವಿಶೇಷ ಆಹ್ವಾನಿತರಿಗೆ ಆಹ್ವಾನಿಸಲಾಗಿದೆ.

ಮಂಗಳವಾರ ಬೆಳಿಗ್ಗೆ ನವದೆಹಲಿಯ ಕೆಂಪುಕೋಟೆಯ ಬಳಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಗೆ ದೇಶದಾದ್ಯಂತ ಒಟ್ಟು 1800 ಮಂದಿ ಆಹ್ವಾನಿಸಲಾಗಿದ್ದು, ಶಿಕ್ಷಕರು, ಮೀನುಗಾರರು, ಕುಶಲಕರ್ಮಿಗಳು ಮತ್ತು ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳನ್ನು ಒಳಗೊಂಡಂತೆ ಕರ್ನಾಟಕದಿಂದ ಆಯ್ಕೆಯಾದ ಒಟ್ಟು 31 ವ್ಯಕ್ತಿಗಳು ನವದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ವೀಕ್ಷಿಸಲಿದ್ದಾರೆ

ಪಿಎಂ-ಕಿಸಾನ್ ಯೋಜನೆಯ ದಾದಿಯರು, ರೈತರು ಮತ್ತು ಫಲಾನುಭವಿಗಳನ್ನು ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲು ದೇಶಾದ್ಯಂತ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರವು ವೈಬ್ರೆಂಟ್ ವಿಲೇಜ್‍ಗಳ ಸರಪಂಚ್, ರೈತರು, ಮೀನುಗಾರರು, ಶಿಕ್ಷಕರು, ದಾದಿಯರು, ಸೆಂಟ್ರಲ್ ವಿಸ್ಟಾ ಯೋಜನೆಯ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರು ಮತ್ತು ಖಾದಿ ವಲಯದ ಕಾರ್ಮಿಕರನ್ನು ಈ ಭವ್ಯ ಸಮಾರಂಭಕ್ಕೆ ಆಹ್ವಾನಿಸಿದೆ.

ಈ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಕಾರ್ಯಕರ್ತರು, ಹಾಗೆಯೇ ಅಮೃತ್ ಸರೋವರ ಯೋಜನೆಗಳು ಮತ್ತು ಹರ್ ಘರ್ ಜಲ ಯೋಜನೆ ಯೋಜನೆಗಳಿಗೆ ಕೊಡುಗೆ ನೀಡಿದವರು ಭಾಗವಹಿಸಲಿದ್ದಾರೆ.

ಈ ಸ್ವಾತಂತ್ರ್ಯ ದಿನಾಚರಣೆಯು ಮೇರಿ ಮಾಠಿ ಮೇರಾ ದೇಶ್ ಅಭಿಯಾನದ ಮೂಲಕ ದೇಶದ ಹುತಾತ್ಮರಿಗೆ ಗೌರವ ಸಲ್ಲಿಸಲಾಗುತ್ತದೆ. ಈ ಅಭಿಯಾನವನ್ನು ಪ್ರಧಾನಿ ನರೇಂದ್ರ ಮೋದಿಯವರು ಜುಲೈ 30 ರಂದು ತಮ್ಮ 103 ನೇ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಘೋಷಿಸಿದರು.

ಅಭಿಯಾನವನ್ನು ಆ.9 ರಿಂದ ಆ. 15 ರವರೆಗೆ ಆಚರಿಸಲಾಗುತ್ತದೆ. ಮೇರಿ ಮಾಠಿ ಮೇರಾ ದೇಶ್ ಅಭಿಯಾನದ ಮೂಲಕ ಭಾರತದ ಶೌರ್ಯವನ್ನು ನೆನೆಯುವುದಾಗಿದೆ. ಇದು ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವ ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿದೆ.

ಅಮೃತ್ ಕಲಶ ಯಾತ್ರೆ ಅಭಿಯಾನದ ಮೂಲಕ ದೇಶದ ವಿವಿಧ ಭಾಗಗಳಿಂದ ಗಿಡ, ಮಣ್ಣನ್ನು ತರಲಾಗುವುದು. ಈ ಮಣ್ಣನ್ನು ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ಅಮೃತ ವಾಟಿಕಾ ನಿರ್ಮಿಸಲು ಬಳಸಲಾಗುವುದು.

 

Share and Enjoy !

Shares