ಬಳ್ಳಾರಿ,ಅ.14
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಅ.15 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವತಿಯಿಂದ ಚೇಂಬರ್ ಆಫ್ ಕಾಮರ್ಸ್ ನ ಆವರಣದಲ್ಲಿ ಏರ್ಪಡಿಸಿರುವ ಇಂಕ್ಯುಬೇಶನ್ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಬೆಳಿಗ್ಗೆ 11.30 ಕ್ಕೆ ನಗರದ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು.
ನಂತರ ಸಂಜೆ 04 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.