Ad image

ನಮ್ಮ ದೇಶದ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ ರತನ್ ಟಾಟಾ ಇನ್ನಿಲ್ಲಾ

Vijayanagara Vani
ನಮ್ಮ ದೇಶದ  ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ ರತನ್ ಟಾಟಾ  ಇನ್ನಿಲ್ಲಾ

ರತನ್ ಟಾಟಾ ಇನ್ನಿಲ್ಲ.. ಈ ಸುದ್ದಿ ಕೇಳಿದ ಪ್ರತಿಯೊಬ್ಬ ಭಾರತೀಯರ ಎದೆಯಲ್ಲಿ ಈಗ ನೋವು ಶುರುವಾಗಿದೆ. ರತನ್ ಟಾಟಾ ಅವರ ಸಾವಿನ ಸುದ್ದಿ ಇದೀಗ ಜಗತ್ತಿನಾದ್ಯಂತ ಕಿಚ್ಚು ಹೊತ್ತಿಸಿದೆ

ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ.

ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆಂದು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಭಾರತೀಯರ ಪಾಲಿಗೆ ರತನ್ ಟಾಟಾ ಅವರು ಎಂದೆಂದಿಗೂ ಲೆಜೆಂಡ್ ಅಂತಾ ಹೇಳಬಹುದು. ಎಲ್ಲವೂ ಚೆನ್ನಾಗಿದೆ, ರತನ್ ಟಾಟಾ ಅವರ ಆರೋಗ್ಯವೂ ಚೆನ್ನಾಗಿದೆ ಎನ್ನವಾಗಲೇ ಇದೀಗ ನಡೆಯಬಾರದ ಘಟನೆ ನಡೆದು ಹೋಗಿದೆ. ರತನ್ ಟಾಟಾ ಎಲ್ಲರನ್ನೂ ಬಿಟ್ಟು ಹೋಗಿದ್ದಾರೆ. ರತನ್ ಟಾಟಾ ಅವರ ಅಭಿಮಾನಿಗಳಿಗೆ ತೀವ್ರ ಆಘಾತವೇ ಎದುರಾಗಿದೆ. ಭಾರತದಲ್ಲಿ ಉದ್ಯಮ ವಲಯವನ್ನು ಜಗತ್ತಿನ ಮಟ್ಟದಲ್ಲಿ ಎದ್ದು ನಿಲ್ಲುವಂತೆ ಬೆಳೆಸಿ, ಭಾರತದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ ರತನ್ ಟಾಟಾ ಅವ್ರು ಶತಕೋಟಿ ಭಾರತೀಯರ ಆರಾಧ್ಯ ದೈವವೇ ಆಗಿದ್ದರು.

Share This Article
error: Content is protected !!
";