ಕೊಪ್ಪಳ ಮೇ 22: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿ, ಅಪಹರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ[ಪೋಕ್ಸೊ] ಕೊಪ್ಪಳ ಇವರು ಮೇ 17 ರಂದು ತೀರ್ಪು ಪ್ರಕಟಿಸಿದ್ದಾರೆ.
ತೋಪಲಕಟ್ಟಿ ಗ್ರಾಮದ ಮಹಾಂತೇಶ ಭೀಮಪ್ಪ ಟಕ್ಕಳಕಿ ಎಂಬ ವ್ಯಕ್ತಿ ಹಾಗೂ ಅದೇ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿ ಅಕ್ಕಪಕ್ಕದ ಮನೆಯವರಾಗಿದ್ದು, ಸಲುಗೆಯಿಂದಿದ್ದು, ಪ್ರೀತಿಸಿ ವಿವಾಹವಾಗುವುದಾಗಿ ಹೇಳುತ್ತಾ ಹಿಂಬಾಲಿಸುತ್ತಿರುತ್ತಾನೆ. ದಿ: 20-06-2021 ರ ಮಧ್ಯಾಹ್ನ ಬಾಧಿತಳು ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಯ ಹಿಂದಿನ ಶೆಡ್ಡಿನಲ್ಲಿ ಆರೋಪಿತನು ಬಾಧಿತಳಿಗೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ಪುಸಲಾಯಿಸಿ ಅತ್ಯಾಚಾರ ಎಸಗಿದ್ದು ನಂತರದಲ್ಲಿ ಸಹ 5-6 ಸಲ ಅದೇ ಶೆಡ್ಡಿನಲ್ಲಿ ಮತ್ತು ದಿ: 10-05-2023 ರಂದು ಬಾಧಿತಳು ಹೊಲದಲ್ಲಿದ್ದಾಗ ಹೊಲಕ್ಕೆ ಹೋಗಿ ಪುನ: ಅತ್ಯಾಚಾರ ಎಸಗಿರುತ್ತಾನೆ. ದಿ: 05-06-2023 ರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಬಾಧಿತಳು ಈಶ್ವರ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದು ಆರೋಪಿತನು ಟಾಟಾಏಸ್ ವಾಹನ ತಂದು ಅದರಲ್ಲಿ ಬಾಧಿತಳನ್ನು ಕೂಡಿಸಿಕೊಂಡು ಕುಷ್ಟಗಿಯ ಅನ್ನಪೂರ್ಣ ದೇವಸ್ಥಾನಕ್ಕೆ ಹೋಗಿ ಬಾಧಿತಳು ಅಪ್ರಾಪ್ತಳು ಎಂದು ಗೊತ್ತಿದ್ದರೂ ಅವಳಿಗೆ ತಾಳಿ ಕಟ್ಟಿ ಬಾಲ್ಯ ವಿವಾಹ ಮಾಡಿಕೊಂಡು ಟಾಟಾಏಸ್ ವಾಹನದಲ್ಲಿ ಸುತ್ತಾಡಿರುವ ಆರೋಪದ ಹಿನ್ನೆಲೆಯಲ್ಲಿ ಕುಷ್ಟಗಿ ಪೊಲೀಸ್ ಠಾಣೆಯ ಪಿ.ಎಸ್.ಐ ಮೌನೇಶ ರಾಠೋಡ ಇವರು ದೂರು ದಾಖಲಿಸಿಕೊಂಡು ಪ್ರಥಮ ಹಂತದ ತನಿಖೆಯನ್ನು ನಿರ್ವಹಿಸಿದ್ದು, ಮುಂದಿನ ತನಿಖೆಯನ್ನು ಕುಷ್ಟಗಿ ಸಿಪಿಐ ನಿಂಗಪ್ಪ ಎನ್.ಆರ್ ಇವರು ನಿರ್ವಹಿಸಿದ್ದು ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಬೀತಾಗಿದ್ದರಿಂದ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣವು ಸ್ಪೇ.ಎಸ್ಸಿ[ಪೋಕ್ಸೊ] ಸಂ: 39/2023ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಆರೋಪಿ ಮಹಾಂತೇಶ ಭೀಮಪ್ಪ ಟಕ್ಕಳಕಿ ಇತನ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 20,000/- ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಕೊಪ್ಪಳದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ, ತ್ವರಿತ ವಿಲೇವಾರಿ[ಪೋಕ್ಸೊ] ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಕುಮಾರ ಡಿ.ಕೆ ಇವರು ಮೇ 17 ರಂದು ತೀರ್ಪು ಹೊರಡಿಸಿರುತ್ತಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಪ್ರಕರಣ ನಡೆಸಿ ವಾದ ಮಂಡಿಸಿದ್ದರು. ಕುಷ್ಟಗಿ ಪೊಲೀಸ್ ಠಾಣೆಯ ಸಿಬ್ಬಂದಿ ಹನುಮೇಶ ಜಗ್ಗಲ್ ಇವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಾಕಷ್ಟು ಸಹಕರಿಸಿರುತ್ತಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರ ಕಚೇರಿ ಪ್ರಕಟಣೆ ತಿಳಿಸಿ