ಶಿವಮೊಗ್ಗ : ಆಗಸ್ಟ್ 01 ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ವಿಕಲಚೇತನ ವ್ಯಕ್ತಿಗಳಿಗೆ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಅತ್ಯುತ್ತಮ ಸೇವೆ ಮಾಡುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಅಧ್ಯಕ್ಷರು/ಕಾರ್ಯದರ್ಶಿಗಳಿಗೆ ಪದ್ಮಶ್ರೇಣಿ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರದಿಂದ ಕೊಡ ಮಾಡುತ್ತಿದ್ದು, ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಆಂಗ್ಲಭಾಷೆಯಲ್ಲಿ ಭರ್ತಿ ಮಾಡಿ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸಾಫ್ಟ್ ಕಾಪಿಯನ್ನು ಇ-ಮೇಲ್ uspolitical-dpar@karnataka.gov.in ಗೆ ಆಗಸ್ಟ್ 31 ರೊಳಗಾಗಿ ಕಳುಹಿಸುವಂತೆ ಜಿಲ್ಲಾ ಅಂಗವಿಕಲಸ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್ಸೈಟ್ https://www.padmaawards.gov.in ಮೂಲಕ ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.08182-295234/251676 ಗಳನ್ನು ಸಂಪರ್ಕಿಸುವುದು.