ವಿವಿಧೆಡೆ ದಾಳಿ: 02 ಬಾಲಕಾರ್ಮಿಕರ ರಕ್ಷಣೆ

Vijayanagara Vani
ವಿವಿಧೆಡೆ ದಾಳಿ: 02 ಬಾಲಕಾರ್ಮಿಕರ ರಕ್ಷಣೆ
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಬಳ್ಳಾರಿ ನಗರದಲ್ಲಿ ವಿವಿಧೆಡೆ ದಾಳಿ ನಡೆಸಿ ಇಬ್ಬರು ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಅವರು ತಿಳಿಸಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಚೈಲ್ಡ್ಲೈನ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಸಭೆಯನ್ನು ನಡೆಸಿ ಈ ಕಾರ್ಯಚಾರಣೆ ಮಾಡಲಾಗಿದೆ.
ನಗರದ ಬೆಂಗಳೂರು ರಸ್ತೆ, ಬಂಡಿಹಟ್ಟಿ, ಎ.ಪಿ.ಎಂ.ಸಿ ವೃತ್ತ ಮಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ, ಇಟ್ಟಂಗಿ ಭಟ್ಟಿ, ಗುಜರಿ ಶಾಪ್ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ಮಾಡಿ 02 ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿ ತರಲು ಸಂಬಂಧಿಸಿದ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಬಳ್ಳಾರಿ ತಾಲ್ಲೂಕು ಕಚೇರಿಯ ಶಿರಸ್ಥೆದಾರರಾದ ಸಾದಿಕ್, ಕಾರ್ಮಿಕ ನಿರೀಕ್ಷಕ ರವಿದಾಸ್, ಶಿಕ್ಷಣ ಸಂಯೋಜಕ ಪಂಪಾಪತಿ, ಭುಜಂಗ ಆಚಾರಿ, ರುದ್ರ ಆಚಾರಿ ಸೇರಿದಂತೆ ಚೈಲ್ಡ್ ಲೈನ್ ಸಿಬ್ಬಂದಿ ಚಂದ್ರಕಲಾ, ಮಕ್ಕಳ ರಕ್ಷಣ ಘಟಕ ಸಿಬ್ಬಂದಿ ನಿಲೋಫಿಯಾ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
WhatsApp Group Join Now
Telegram Group Join Now
Share This Article
error: Content is protected !!