Ad image

ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು, ನಗರದಲ್ಲಿ ಸಂಭ್ರಮಾಚರಣೆ

Vijayanagara Vani
ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು, ನಗರದಲ್ಲಿ ಸಂಭ್ರಮಾಚರಣೆ

ಸಿರುಗುಪ್ಪ. ಜೂ-07 ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಅಂತಿಮಗೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಚಂದ್ರಶೇಖರ್ ಬಸವರಾಜ ಪಾಟೀಲ್ ಜಯಶೀಲರಾಗಿದ್ದಾರೆಂದು ಘೋಷಣೆ ಆಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳೆಲ್ಲ ಸೇರಿ ನಗರದ ಗಾಂಧಿ ಸರ್ಕಲ್’ನಲ್ಲಿ ಶುಕ್ರವಾರ ಮಿನಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧಿಜೀ‌ ಮೂರ್ತಿಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಘೋಷಣೆಗಳನ್ನು ಹಾಕುತ್ತಾ ಸಂಭ್ರಮ ಆಚರಿಸಿದರು.

ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ, ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಗೆಲುವು ಸಾಧಿಸಿದ್ದಾರೆ. 43,484 ಮತ ಪಡೆದಿದ್ದು, ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಮರನಾಥ ಪಾಟೀಲರನ್ನು 4651 ಮತಗಳಿಂದ ಪರಾಭವ ಗೊಳಿಸಿದ್ದಾರೆ.ಈ ವಿಜಯದ ಹಿನ್ನಲೆಯಲ್ಲಿ ಕಾಂಗ್ರೇಸ್ ಮುಖಂಡರು ವಿಜಯೋತ್ಸವದ …

Share This Article
error: Content is protected !!
";