ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಿ; ಸರಕಾರಿ ಯೋಜನೆಗಳ ಸಂಪೂರ್ಣ ಲಾಭ….ಬಡವರಿಗೆ, ಅರ್ಹರಿಗೆ ಮುಟ್ಟಬೇಕು; ಜಿಲ್ಲೆಯಲ್ಲಿ ಪಂಚ ಗ್ಯಾರಂಟಿಗಳಿಗೆ…..ಫಲನುಭವಿಗಳಿಂದ ಉತ್ತಮ ಸ್ಪಂದನೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

Vijayanagara Vani
ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಿ; ಸರಕಾರಿ ಯೋಜನೆಗಳ ಸಂಪೂರ್ಣ ಲಾಭ….ಬಡವರಿಗೆ, ಅರ್ಹರಿಗೆ ಮುಟ್ಟಬೇಕು; ಜಿಲ್ಲೆಯಲ್ಲಿ ಪಂಚ ಗ್ಯಾರಂಟಿಗಳಿಗೆ…..ಫಲನುಭವಿಗಳಿಂದ ಉತ್ತಮ ಸ್ಪಂದನೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

ಧಾರವಾಡ ಅಗಸ್ಟ್ 15: ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು. ಸರಕಾರದ ಎಲ್ಲ ಜನ ಕಲ್ಯಾಣ ಕಾರ್ಯಕ್ರಮಗಳು ಬಡವರಿಗೆ , ಅರ್ಹರಿಗೆ ತಲುಪಿಸುವಲ್ಲಿ ಎಲ್ಲರ ಪಾತ್ರ ಮುಖ್ಯವಾಗಿದೆ. ರಾಜ್ಯ ಸರಕಾರದ ಜನಪರ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠನಗೊಂಡಿದ್ದು, ಫಲಾನುಭವಿಗಳಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಡಳಿತದಿಂದ ಆರ್.ಎನ್.ಶಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 78ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರಧ್ವಜಾರೋಹಣ ನೇರವೇರಿಸಿ, ಸಾರ್ವಜನಿಕರನ್ನು ಉದ್ದೇಶಿಸಿ, ಮಾತನಾಡಿದರು.

ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ ಸಂಪೂರ್ಣ ಲಾಭ ಬಡವರು ಮತ್ತು ಯೋಗ್ಯರಿಗೆ ತಲುಪುವಂತೆ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಸಚಿವ ಸಂತೋಷ ಲಾಡ ಅವರು ಹೇಳಿದರು.

ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿರುವ ಗಣ್ಯ ವ್ಯಕ್ತಿಗಳಿಗೆ ನನ್ನ ಅಭಿನಂದನೆಗಳು. ಎಲ್ಲ ಕ್ಷೇತ್ರದ ಸಾಧಕರು, ಪ್ರಮುಖರು ಜಿಲ್ಲೆಯ ಅಭಿವೃದ್ಧಿಗೆ ತಮ್ಮ ಸಲಹೆ ಹಾಗೂ ಸಹಕಾರವನ್ನು ನೀಡುವಂತೆ ತಮ್ಮಲ್ಲಿ ವಿನಂತಿಸುತ್ತೇನೆ ಎಂದು ಸಚಿವರು ತಿಳಿಸಿದರು.

*ಸ್ವಾತಂತ್ರ್ಯ ಸಂಗ್ರಾಮದ ಸ್ಫೂರ್ತಿಯ ಮೆಲುಕು:* ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದ ಎಲ್ಲೆಡೆ ರಾಷ್ಟ್ರ ಧ್ವಜವನ್ನು ಹಾರಿಸುವುದು, ಸ್ವಾತಂತ್ರ್ಯ ಹೋರಾಟಗಾರರ ಕುರಿತು ಭಾಷಣಗಳು, ವಿವಿಧ ಸ್ವಾತಂತ್ರ್ಯ ಚಳುವಳಿಗಳ ಬಗ್ಗೆ ಮಾಹಿತಿ ನೀಡುವುದು, ರಾಷ್ಟ್ರ ಗೀತೆ ಹಾಡುವುದು ಇನ್ನೂ ಹಲವು ಚಟುವಟಿಕೆಗಳು ಸೇರಿದಂತೆ ಸುಂದರವಾದ ಸಮಾರಂಭಗಳನ್ನು ಹಮ್ಮಿಕೊಳ್ಳುವ ಮುಖಾಂತರ ಮತ್ತು

ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ಮಹನೀಯರ ನೆನಪಿನಲ್ಲಿ ಮತ್ತು ಅವರುಗಳಿಗೆ ಗೌರವ ಸಲ್ಲಿಸುವುದಕ್ಕಾಗಿ ಈ ದಿನವನ್ನು ಸಡಗರದಿಂದ ಆಚರಿಸಲಾಗುತ್ತಿದೆ ಎಂದು ಸಚಿವರು ನುಡಿದರು.

*ರಾಷ್ಟ್ರಿಯ ನಾಯಕರ ಸ್ಮರಣೆ:* ಭಾರತದ ರಾಷ್ಟ್ರೀಯ ಚಳುವಳಿಯನ್ನು ನೂರಾರು ವರ್ಷಗಳಿಂದ ರೂಪಿಸಿದ ನಮ್ಮ ಹಿರಿಯ ಹೊರಾಟಗಾರರಾದ ರಾಜಾರಾಮ್ ಮೋಹನ್ ರಾಯ್, ದಾದಾಬಾಯಿ ನವರೋಜಿ, ರವಿಂದ್ರನಾಥ ಠಾಗೋರ್, ಗೋಪಾಲಕೃಷ್ಣ ಗೋಖಲೆ, ಮಹಾತ್ಮ ಗಾಂಧೀಜಿ, ಲಾಲಾ ಲಜಪತರಾಯ್, ಜವಾಹರಲಾಲ್ ನೆಹರು, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಮೌಲಾನಾ ಆಜಾದ್ ಮೊದಲಾದ ಮಹನೀಯರು ಮಾಡಿದ ತ್ಯಾಗ, ಬಲಿದಾನಗಳ ಫಲದಿಂದ ನಾವೆಲ್ಲರೂ ಸ್ವಾತಂತ್ರ್ಯವನ್ನು ಪಡೆದಿದ್ದೇವೆ. ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ರವರು ರಚಿಸಿದ ಭಾರತದ ಸಂವಿಧಾನವು ರಾಷ್ಟ್ರದ ಆಡಳಿತ ಮತ್ತು ಅಭಿವೃದ್ಧಿಯ ಬುನಾದಿಯಾಗಿದೆ ಎಂದು ಸಚಿವರು ಹೇಳಿದರು.

*ಧಾರವಾಡ ಜಿಲ್ಲೆಯ ನಮ್ಮವರ ನೆನಪು:* ಅಹಿಂಸಾ ಮಾರ್ಗದಲ್ಲಿಯೇ ಸ್ವಾತಂತ್ರ್ಯವನ್ನು ಪಡೆದುಕೊಳ್ಳಬೇಕೆಂಬ ಮಹಾತ್ಮಾ ಗಾಂಧೀಜಿ ಅವರ ಹೋರಾಟಕ್ಕೆ ಈ ಭಾಗದ ಮೈಲಾರ ಮಹದೇವಪ್ಪ, ಆರ್.ಆರ್.ದಿವಾಕರ್, ಉಮಾಬಾಯಿ ಕುಂದಾಪುರ, ಎನ್.ಎಸ್. ಹರಡೀಕರ್, ಕೆ.ಎಫ್.ಪಾಟೀಲ, ಗೋವಿಂದಾಚಾರ್ಯ ಅಗ್ನಿಹೋತ್ರಿ, ನರಸಿಂಹ ದಾಬಡೆ ಮೊದಲಾದ ನೇತಾರರು ಕೈ ಜೋಡಿಸಿದ್ದರು.

ನಮ್ಮ ದೇಶದ ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರಲಾಂಛನಗಳು ರಾಷ್ಟ್ರದ ಅಸ್ತಿತ್ವ, ಸಾರ್ವಭೌಮತ್ವವನ್ನು ಸಾರುತ್ತಿವೆ ಹಾಗೂ ರಾಷ್ಟ್ರದ ಹಿನ್ನಲೆ, ಕಲ್ಪನೆ ಮತ್ತು ಸಂಸ್ಕøತಿಯನ್ನು ಪ್ರತಿಪಾದಿಸುತ್ತವೆ. ಈ ಹಿನ್ನಲೆಯಲ್ಲಿ ಇವುಗಳಿಗೆ ಗೌರವ ತೋರುವುದು, ಗೌರವ ದೊರಕಿಸಿಕೊಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಸಚಿವ ಸಂತೋಷ ಲಾಡ ತಿಳಿಸಿದರು.

*ನಮ್ಮ ಧ್ವಜ, ನಮ್ಮ ಹೆಮ್ಮೆ:* ದೇಶದ ಉಜ್ವಲ ಭವಿಷ್ಯಕ್ಕಾಗಿ ಪ್ರತಿಯೊಬ್ಬ ನಾಗರಿಕನು ಬೆಳೆಯಲು ಮತ್ತು ದೇಶದ ಪ್ರಗತಿಗೆ ಕೊಡುಗೆ ನೀಡಲು ಅವಕಾಶವನ್ನು ಪಡೆಯುವಂತಾಗಲಿ ಎಂದು ನಾವು ಒಟ್ಟಾಗಿ ಪ್ರತಿಜ್ಞೆ ಮಾಡೋಣ. ನಮ್ಮ ದೇಶದ ಹೆಮ್ಮೆಯ ಸಂಕೇತವಾಗಿರುವ ರಾಷ್ಟ್ರಧ್ವಜವನ್ನು ಧಾರವಾಡದ ಗರಗ ಹಾಗೂ ಹುಬ್ಬಳ್ಳಿಯ ಬೆಂಗೇರಿಯಲ್ಲಿ ಸಿದ್ಧಪಡಿಸಿ ದೇಶಕ್ಕೆ ಒದಗಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ.

ನಾವು ತ್ರಿವರ್ಣ ಧ್ವಜವನ್ನು ಹಾರಿಸುವಾಗ ಅದು ನಮ್ಮ ಏಕತೆ, ವೈವಿಧ್ಯತೆ ಮತ್ತು ಮುರಿಯಲಾಗದ ಮನೋಭಾವದ ಸಂಕೇತವಾಗಿರಲಿ ಎಂದು ಸಚಿವ ಸಂತೋಷ ಲಾಡ ತಮ್ಮ ಆಶಯ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಧಾರವಾಡ ಜಿಲ್ಲೆಗೆ ಭೇಟಿ ಕೊಟ್ಟ ಮಹನೀಯರಾದ ಮಹಾತ್ಮಾ ಗಾಂಧೀಜಿ, ಡಾ. ರಾಜೇಂದ್ರ ಪ್ರಸಾದ್, ಸುಭಾμï ಚಂದ್ರ ಬೋಸ್ ಇವರುಗಳನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳೋಣ ಎಂದರು.

ಸ್ವಾತಂತ್ರ್ಯ ಹೋರಾಟದಲ್ಲಿ ಧಾರವಾಡ ಜಿಲ್ಲೆಯಿಂದ ಪ್ರಕಟವಾಗುತ್ತಿದ್ದ ರಾಜಹಂಸ ಪತ್ರಿಕೆ, ಕನ್ನಡ ಕೇಸರಿ ಹಾಗೂ ಇತರೆ ಪತ್ರಿಕೆಗಳ ಪಾತ್ರವು ಬಹಳ ಮುಖ್ಯವಾಗಿದೆ.

ಸರ್ ಸಿದ್ದಪ್ಪ ಕಂಬಳಿ, ಡೆಪ್ಯೂಟಿ ಚೆನ್ನಬಸಪ್ಪ, ಅರಟಾಳ ರುದ್ರಗೌಡರು, ಈ ಭಾಗದ ಶಿಕ್ಷಣ ಮತ್ತು ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ನಾವು ಸದಾಕಾಲ ನೆನಪಿಸಿಕೊಳ್ಳೋಣ ಎಂದು ಸಚಿವ ಸಂತೋಷ ಲಾಡ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಶುಭ ದಿನದಂದು ಒಲಂಪಿಕ್ ಪಂದ್ಯಾವಳಿಯಲ್ಲಿ ಭಾಗವಹಿಸಿ ದೇಶಕ್ಕೆ ಪದಕಗಳನ್ನು ತಂದಂತಹ ಕ್ರೀಡಾಪಟುಗಳಿಗೆ ಜನತೆಯ ಪರವಾಗಿ ಶುಭಾಶಯಗಳನ್ನು ಸಲ್ಲಿಸೋಣ. ನಾವೆಲ್ಲರೂ ಒಟ್ಟಾಗಿ ಇಂದು ನಮ್ಮ ಸ್ವಾತಂತ್ರ್ಯವನ್ನು ಆಚರಿಸುತ್ತಿರುವಾಗ ನಮ್ಮ ಬದ್ಧತೆಯನ್ನು ನವೀಕರಿಸೋಣ. ನಾವು ಯಾವಾಗಲೂ ನಮ್ಮ ರಾಷ್ಟ್ರದ ಯೋಗಕ್ಷೇಮಕ್ಕೆ ಆದ್ಯತೆ ನೀಡೋಣ. ನಾವು ನಮ್ಮ ಸಮಾಜಕ್ಕೆ ಸಕಾರಾತ್ಮಕವಾಗಿ ಕೊಡುಗೆ ನೀಡೋಣ. ನಮ್ಮ ಮೌಲ್ಯಗಳನ್ನು ಎತ್ತಿಹಿಡಿಯೋಣ ಮತ್ತು ಎಲ್ಲರಿಗೂ ಉಜ್ವಲ ಭವಿಷ್ಯವನ್ನು ನಿರ್ಮಿಸಲು ಕೆಲಸ ಮಾಡೋಣ ಎಂದು ಸಚಿವ ಸಂತೋಷ ಲಾಡ ಅವರು ಮನಬಿಚ್ಚಿ ಮಾತನಾಡಿ, ಅಭಿಮಾನ ಮತ್ತು ಬದ್ಧತೆಯಿಂದ ಸಂಕಲ್ಪ ಮಾಡಿದರು.

*ರಾಜ್ಯ ಸರಕಾರ ನುಡಿದಂತೆ ನಡೆದಿದೆ;* ರಾಜ್ಯ ಸರಕಾರವು ಜನಪರ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಪ್ರಗತಿ: ಶಕ್ತಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ 91.09 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದು, ರೂ. 26.02 ಕೋಟಿ ಮೊತ್ತದ ಸೇವೆಯನ್ನು ಪಡೆದಿರುತ್ತಾರೆ.

ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ ಎರಡು ಸಾವಿರ ರೂ.ಗಳಂತೆ ಧಾರವಾಡ ಜಿಲ್ಲೆಯಲ್ಲಿ ಒಟ್ಟು 3,66,734 ಮಹಿಳೆಯರು ರೂ.688 ಕೋಟಿ ಮೊತ್ತದ ಉಪಯೋಗವನ್ನು ಪಡೆಯುತ್ತಿದ್ದಾರೆ.

ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 4,82,274 ಗ್ರಾಹಕರು ಪ್ರಯೋಜನ ಪಡೆದಿದ್ದು, ರೂ.244 ಕೋಟಿಗಳನ್ನು ವೆಚ್ಚ ಮಾಡಲಾಗಿದೆ..

ಅನ್ನಭಾಗ್ಯ ಯೋಜನೆಯಡಿ ಯಾರೂ ಸಹ ಹಸಿವಿನಿಂದ ಇರದಂತೆ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ 3,83,161 ಬಿ.ಪಿ.ಎಲ್. ಕುಟುಂಬಗಳಿಗೆ ಆಹಾರ ಭದ್ರತೆಯನ್ನು ಒದಗಿಸಲಾಗಿದೆ. ಬಿ.ಪಿ.ಎಲ್. ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ರೂ.170/- ಗಳಂತೆ ರೂ. 215 ಕೋಟಿಗಳನ್ನು ಅವರ ಖಾತೆಗೆ ಜಮೆ ಮಾಡಲಾಗಿದೆ.

ಯುವನಿಧಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ 3230 ಫಲಾನುಭವಿಗಳಿಗೆ ನೇರ ನಗದು (ಡಿಬಿಟಿ) ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ ಅವರು ಹೇಳಿದರು.

ಜಿಲ್ಲೆಯಲ್ಲಿ ಮುಂಗಾರು,ಮಳೆ: 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 2.71 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇದ್ದು, ಈ ವರೆಗೆ 2.71 ಲಕ್ಷ ಹೆಕ್ಟೇರ್‍ಗಳಷ್ಟು ಪ್ರದೇಶ ಬಿತ್ತನೆಯಾಗಿದೆ.

ಮುಂಗಾರು ಹಂಗಾಮಿನಲ್ಲಿ ಒಟ್ಟು 11,521 ಕ್ವಿಂಟಾಲ್ ವಿವಿಧ ಬಿತ್ತನೆ ಬೀಜಗಳನ್ನು ಹಾಗೂ 45,282 ಮೆ.ಟನ್‍ಗಳಷ್ಟು ರಸಗೊಬ್ಬರವನ್ನು ವಿತರಿಸಲಾಗಿದೆ.

ಜನವರಿ 1, 2024 ರಿಂದ ಆಗಸ್ಟ್ 2,2024 ರವರೆಗೆ 425.2 ಮಿ.ಮೀ ವಾಡಿಕೆ ಮಳೆಗೆ, 472 ಮಿ.ಮೀ. ದಷ್ಟು ವಾಸ್ತವ ಮಳೆಯಾಗಿದೆ ಎಂದು ಸಚಿವರು ತಿಳಿಸಿದರು.

ಧಾರವಾಡ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗಾಗಿ ಒಟ್ಟು ರೂ.20 ಕೋಟಿಗಳ ಅನುದಾನ ಲಭ್ಯವಿದೆ. ಜಿಲ್ಲೆಯಲ್ಲಿ ವಿಪತ್ತು ಉಂಟಾದರೆ, ಸಮರ್ಥವಾಗಿ ನಿರ್ವಹಿಸಲು ಅಗತ್ಯ ಅನುದಾನವನ್ನು ಸರಕಾರ ನೀಡಿದ್ದು, ಜಿಲ್ಲಾಡಳಿತದ ಬಳಿ ಜಮೆ ಇದೆ ಎಂದು ಸಚಿವ ಸಂತೋಷ ಲಾಡ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸಲು ‘ಜನಸ್ಪಂದನಾ’ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಮತ್ತು ಗ್ಯಾರಂಟಿ ಯೋಜನೆಗಳ ಸಮಾವೇಶಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ ಎಂದು ಸಚಿವರು ಹೇಳಿದರು.

ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರವು ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ತಾವು ಮಂಡಿಸಿರುವ ಈ ಸಾಲಿನ ಬಜೆಟ್ ಮುಖಾಂತರ ನಾಡಿನ ಜನತೆಗೆ ತಿಳಿಸಿ, ಅವರ ಪ್ರೀತಿ ಗಳಿಸಿದ್ದಾರೆ.

ರೈತರು, ಕಾರ್ಮಿಕರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲಾ ವರ್ಗದ ಬಡ ಜನತೆಗೆ ಭದ್ರತೆಯನ್ನು ಒದಗಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ.ಸಿ.ಡಿ., ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠನ ಸಮಿತಿ ಅಧ್ಯಕ್ಷ ಆರ್.ಎಸ್.ಪಾಟೀಲ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ದೀಪಕ ಮಡಿವಾಳರ, ಉಪ ವಿಭಾಗಾಧಿಕಾರಿ ಶಾಲಂ ಹುಸೆನ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ, ಆರ್ ಸಿಎಚ್‍ಓ ಡಾ.ಸುಜಾತಾ ಹಸವಿಮಠ, ಸ್ಮಾರ್ಟ ಸಿಟಿ ಜಂಟಿ ನಿರ್ದೇಶಕ ಅಜೀಜ ದೇಸಾಯಿ, ಹುಡಾ ಆಯುಕ್ತ ಸಂತೋಷ ಬಿರಾದಾರ, ಆಹಾರ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭ ಪಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಭಾಗವಹಿಸಿದ್ದರು.

*ವಿವಿಧ ಕ್ಷೇತ್ರದಲ್ಲಿನ ಸಾಧಕರಿಗೆ ಸನ್ಮಾನ:* ಪ್ರತಿ ವರ್ಷದಂತೆ ಈ ವರ್ಷವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಧಾರವಾಡ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಪರವಾಗಿ ಸಚಿವ ಸಂತೋಷ ಲಾಡ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸನ್ಮಾನಿಸಿ, ಗೌರವಿಸಿದರು.

ದೆಹಲಿಯಲ್ಲಿ ಜರುಗಿದ 4ನೇ ರಾಷ್ಟ್ರೀಯ ಪ್ಯಾರಾ ಓಲಂಪಿಕ್ ಶೂಟಿಂಗ್ ಚಾಂಪಿಯಶಿಫ್ ನಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆದಿರುವ ಶಂಕರಲಿಂಗ ಟವಳಿ ಅವರಿಗೆ ಕ್ರೀಡಾ ವಿಭಾಗದಲ್ಲಿ ಮತ್ತು 26ನೇ ರಾಷ್ಟ್ರೀಯ ಯೋಗಾಸನ ಚಾಂಪಿಯಶಿಫ್ ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುವ ಶ್ರೀಧರ್ ಹೊಸಮನಿ ಅವರಿಗೆ ಯೋಗ ಕ್ಷೇತ್ರದಲ್ಲಿ ಮತ್ತು ಹಿರಿಯ ಜಾನಪದ ನೃತ್ಯ ಕಲಾವಿದ ಸಂಜು ಕುಂದಗೋಳ ಅವರಿಗೆ ನೃತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಡಿ.ಆರ್.ಪಾಟೀಲ ಅವರಿಗೆ, ಸಂಜೀವ ದುಮಕನಾಳ ಅವರಿಗೆ ಮಕ್ಕಳ ಸೇವಾ ಕ್ಷೇತ್ರದಲ್ಲಿ ಮತ್ತು ಚಿತ್ರಕಲಾ ಕ್ಷೇತ್ರದಲ್ಲಿ ಅನ್ನಪೂರ್ಣ ನಿಂಬಿಕಾಯಿ ಅವರಿಗೆ, ಸಮಾಜ ಸೇವೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಡಾ. ವೆಂಕಟರಾವ್ ಕಟ್ಟಿ ಅವರಿಗೆ, ಮತ್ತು ಅತ್ಯದ್ಭುತ ಜ್ಞಾಪಕ ಶಕ್ತಿಯನ್ನು ಮೆಚ್ಚಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಪಡೆದಿರುವ ಹಾಗೂ ಓಲ್ಡ್ ರೆಕಾರ್ಡ್ ಯುನಿವರ್ಸಿಟಿಯ ಗ್ರಾಂಡ್ ಮಾಸ್ಟರ್ ಎಂಬ ಅವಾರ್ಡ್ ಗೆ ಆಯ್ಕೆಯಾಗಿರುವ ನಾಲ್ಕು ವರ್ಷದ ಬಾಲಕ ಆರ್ಯವರ್ಧನ ಕೋಟಿ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿ, ಜಿಲ್ಲಾಡಳಿತ ಸನ್ಮಾನಿಸಿ, ಗೌರವಿಸಿದೆ.

*ಅಂಗಾಗ ದಾನಿಯ ಕುಟುಂಬಕ್ಕೆ ಅಭಿನಂದನಾಪತ್ರ:* ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಸ್.ಓ.ಟಿ.ಟಿ.ಓ ಯೋಜನೆಯಡಿ ಅಂಗದಾನಿಯ ಕುಟುಂಬಕ್ಕೆ ಪ್ರಶಂಸನಾ ಮತ್ತು ಅಭಿನಂದನಾ ಪ್ರಮಾಣಪತ್ರ ನೀಡಲಾಗುತ್ತದೆ.

ಅದರಂತೆ ಹುಬ್ಬಳ್ಳಿಯ ಜೆಪಿ ನಗರದ ಗೋಕುಲ ರಸ್ತೆಯ ನಿವಾಸಿ ಗೋಪಾಲ ಪಾಟೀಲ (79) ಅವರು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಲ್ಲಿ ಡಿಸೆಂಬರ್ 29, 2023 ರಲ್ಲಿ ನಿಧನರಾದಾಗ ಅವರ ಕುಟುಂಬ ಸದಸ್ಯರು, ಗೋಪಾಲ ಪಾಟೀಲ ಅವರ ಲೀವರ್ ನ್ನು ಆಸ್ಪತ್ರೆಗೆ ದಾನ ಮಾಡಿದ್ದರು.

ಈ ನಿಮತ್ತ ರಾಜ್ಯ ಸರಕಾರದಿಂದ ಕೊಡಮಾಡಿದ ಪ್ರಶಂಸನಾ ಹಾಗೂ ಅಭಿನಂದನಾ ಪ್ರಮಾಣಪತ್ರವನ್ನು ದಿವಂಗತ ಗೋಪಾಲ ಪಾಟೀಲ ಅವರ ಮಗ ಗುರುರಾಜ ಪಾಟೀಲ ಮತ್ತು ಕುಟುಂಬದವರಿಗೆ ರಾಜ್ಯ ಸರಕಾರದ ಪರವಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಇಂದು ನೀಡಿ, ಗೌರವಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ ಹಾಗೂ ಇತರರು ಇದ್ದರು.

*ಶಿಸ್ತಿನ ಕವಾಯತ್ತು, ಆಕರ್ಷಕ ಪ್ರದರ್ಶನ:* ಆಗಸ್ಟ್ 15, 2024 ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 14 ಹೆಚ್ಚು ಇಲಾಖೆ, ಶಾಲಾ ಕಾಲೇಜು ವಿದ್ಯಾರ್ಥಿಗಳ ತಂಡಗಳು ಕಾವಾಯತ್ ನಲ್ಲಿ ಭಾಗವಹಿಸಿದ್ದವು.

ಆರ್.ಎಸ್.ಐ. ಮಲ್ಲನಗೌಡ ಗುತ್ತರಗಿ ನೇತೃತ್ವದ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಪಿಎಸ್ಐ ಮಂಜುಳಾ ಸದಾರಿಯವರ ನೇತೃತ್ವದ ನಾಗರಿಕ ಪೊಲೀಸ್ ತುಕಡಿ, ಪಿ.ಎಸ್.ಐ ಕವಿತಾ ಮಾಡಗ್ಯಾಳ ಅವರ ನೇತೃತ್ವದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯದ ಮಹಿಳಾ ತಂಡ, ರಾಚಯ್ಯ ಅಮರಪ್ಪನಮಠ ಅವರ ನೇತೃತ್ವದ ಹೊಮ್ ಗಾಡ್ರ್ಸ್ ತಂಡ, ಎಫ್.ಎಸ್.ಓ ಆಕಾಶಗೌಡ ಬಿ. ಎಸ್.ಅವರ ನೇತೃತ್ವದ ಅಗ್ನಿಶಾಮಕ ತಂಡ, ಚಂದ್ರಶೇಖರ್ ರೊಟ್ಟಿ ಅವರ ನೇತೃತ್ವದ ಅರಣ್ಯ ಇಲಾಖೆಯ ತಂಡ, ಶ್ರೀಧರ ಕಿರೇಸೂರ ನೇತೃತ್ವದ ಸೀನಿಯರ್ ಎನ್.ಸಿ.ಸಿ ತಂಡ, ಕುಮಾರ ವೀರೇಶ್ ಅಂಗಡಿ ಅವರ ನೇತೃತ್ವದ ಕರ್ನಾಟಕ ಹೈ ಸ್ಕೂಲ್ ನ ಜೂನಿಯರ್ ಎನ್. ಸಿ. ಸಿ ತಂಡ, ಕುಮಾರಿ ಗೌತಮಿ ಭಟ್ ಅವರ ನೇತೃತ್ವದ ಶಾಲಾ ತಂಡ, ಕುಮಾರ ಹರೀಶ್ ರಾಥೋಡ್ ಅವರ ನೇತೃತ್ವದ ಎನ್.ಎ ಮುತ್ತಣ್ಣ ಪೊಲೀಸ್ ಮಕ್ಕಳ ವಸತಿ ಶಾಲೆ ತಂಡ, ಕುಮಾರಿ ಪ್ರಿಯ ಲಮಾಣಿ ಅವರ ನೇತೃತ್ವದ ಕಲಘಟಗಿ ತಾಲೂಕಿನ ಆಸ್ತಿಕಟ್ಟೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಭಾರತ ಸೇವಾದಳ ತುಕಡಿ, ಕುಮಾರಿ ತೇಜಸ್ವಿನಿ ಕಬ್ಬೂರ ಅವರ ನೇತೃತ್ವದ ಕೊಟಬಾಗಿ ಸರ್ಕಾರಿ ಪ್ರೌಢಶಾಲೆಯ ತಂಡ, ಕುಮಾರ ಸಂಕೇತ್ ಅವರ ನೇತೃತ್ವದ ಹೊಳೆಆಲೂರು ಆದರ್ಶ ವಿದ್ಯಾಲಯದ ತಂಡ, ಕುಮಾರಿ ಅನುಶಾ ಮಡಿವಾಳರ ಅವರ ನೇತೃತ್ವದ ಹುಬ್ಬಳ್ಳಿಯ ವಿಶ್ವ ಭಾರತಿ ಶಾಲೆಯ ತಂಡ, ಕುಮಾರ ಯುವರಾಜ ಕೋಲಾರ ಅವರ ನೇತೃತ್ವದ ಧಾರವಾಡ ಸೆಂಟ್ ಜೋಸೆಫ್ಸ್ ಶಾಲೆಯ ತಂಡ, ಕುಮಾರ ಪೃಥ್ವಿರಾಜ್ ಅವರ ನೇತೃತ್ವದ ಹಿಂದುಸ್ತಾನ್ ಸ್ಕೌಟ್ಸ್ ಮತ್ತು ಗೈಡ್ಸ್ ತಂಡ, ಕುಮಾರಿ ಕೀರ್ತನ ಸಂಗಣ್ಣವರ ಅವರ ನೇತೃತ್ವದ ಹುಬ್ಬಳ್ಳಿಯ ಎಂ.ಆರ್ ಸಾಕ್ರೆ ಶಾಲೆಯ ತಂಡ, ಕುಮಾರಿ ಪಲ್ಲವಿ ದೇವನ್ನವರ ನೇತೃತ್ವದ ಉಣಕಲ್ ದ ಆರ್. ಕೆ.ಕೊಕಾಟಿ ಶಾಲೆಯ ತಂಡಗಳು ಭಾಗವಹಿಸಿ, ಆಕರ್ಷಕ ಪಥಸಂಚಲನದ ಮೂಲಕ ಕ್ರೀಡಾಂಗಣದ ಕವಾಯತ್ ದಲ್ಲಿ ಶಿಸ್ತಿನಿಂದ ಪ್ರದರ್ಶಿಸಿದರು.

ಎ.ಆರ್.ಎಸ್. ಐ ವೈ.ಎಫ್. ಭಜಂತ್ರಿ ಅವರ ನೇತೃತ್ವದ ಪೆÇಲೀಸ್ ವಾಧ್ಯ ವೃಂದ ಹಾಗೂ ಡಿ.ಎ.ಆರ್. ಸಾಗರ ಬಸರಿಕೋಡಿ ಅವರ ನೇತೃತ್ವದ ಸ್ಟಿಕ್ ಮೇಜರ್ ತಂಡಗಳು ಭಾಗವಹಿಸಿ, ಆಕರ್ಷಕ ಪಥಸಂಚಲನಕ್ಕೆ ಮೆರಗು ಮೂಡಿಸಿದವು.

*ಮೌಲಾನ ಅಬ್ದುಲ್ ಕಲಾಂ ಅಜಾದ್ ಪ್ರತಿಭಾ ಪುರಸ್ಕಾರ:* ಮೌಲಾನ ಅಬ್ದುಲ್ ಕಲಾಂ ಅಜಾದ್ ಪ್ರತಿಭಾ ಪುರಸ್ಕಾರವನ್ನು ಪಿಯುಸಿ.ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಅಸಮೀರ, ಸಮೇದ.ಟಿಕ್ಕೆ, ಹಾದಿಯಾ, ಅಪರಾಜಿಬಿನ, ಶಾಹೀದ ಹಾಗೂ ಉಮ್ಮೇಕುಲಸಂ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದಿದ್ದಾರೆ.

ಬುಶೀರಾಫಾತಿಮಾ, ತಾರಿಮಾ, ಅಮೀನನಾಜ ಹಾಗೂ ಮುಸ್ತಾಕ ಅಹ್ಮದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.

*ಆಕರ್ಷಕ ಮೆರವಣಿಗೆ:* ಸ್ವಾತಂತ್ರ್ಯೋತ್ಸವದ ಸಂಭ್ರಮ ಹೆಚ್ಚಿಸಲು ಜಿಲ್ಲಾಡಳಿತವು ಡೆಪುಟಿ ಚೆನ್ನಬಸಪ್ಪ ಪ್ರತಿಮೆ ಆವರಣದಿಂದ ಮುಖ್ಯ ವೇದಿಕೆ ಇರುವ ಜಿಲ್ಲಾ ಕ್ರೀಡಾಂಗದವರೆಗೆ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ಆಯೋಜಿಸಿತ್ತು. ಮೆರವಣಿಗೆಯಲ್ಲಿ ಡೊಳುಕುಣಿತ, ಜಗ್ಗಲಿಗೆ ಕೋಲಾಟ ಮುಂತಾದವುಗಳ ಆಕರ್ಷಕ ಪ್ರದರ್ಶನವಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು ಸೇರಿದಂತೆ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

*ಮಹನೀಯರ ಪ್ರತಿಮೆಗೆ ಪುಷ್ಪ, ಗೌರವ ಸಮರ್ಪಣೆ:* ಸ್ವಾತಂತ್ರ್ಯೋತ್ಸವದ ಹಿನ್ನಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಅವರು ಇಂದು ಬೆಳಿಗ್ಗೆ, ಕಾರ್ಗಿಲ್ ಸ್ತೂಪ, ಡೆಪ್ಯೂಟಿ ಚೆನ್ನಬಸಪ್ಪ ಪ್ರತಿಮೆ, ಕೆ.ಜಿ.ಕುಂದಣಗಾರ ಪ್ರತಿಮೆಗೆ ಹೂವಿನ ಹಾರ ಹಾಕಿ, ಪುಷ್ಪರ್ಚನೆ ಮಾಡಿ, ಗೌರವ ಸಮರ್ಪಿಸಿದರು.

 

WhatsApp Group Join Now
Telegram Group Join Now
Share This Article
error: Content is protected !!