Ad image

ಮಾದಕ ವಸ್ತುಗಳ ವಿರುದ್ಧ ಸಾರ್ವಜನಿಕರಿಗಾಗಿ ವ್ಯಾಪಕ ಜಾಗೃತಿ ಕಾರ್ಯಕ್ರಮ ರೂಪಿಸಿ; ಶಾಲಾ ಕಾಲೇಜುಗಳ ವಿದ್ಯಾರ್ಥಿ, ಶಿಕ್ಷಕ ಮತ್ತು ಪಾಲಕರಲ್ಲಿ ಸಮನ್ವಯ ಸಾಧಿಸಿ:ಜಿಲ್ಲಾಧಿಕಾರಿ ದಿವ್ಯ ಪ್ರಭು

Vijayanagara Vani
ಮಾದಕ ವಸ್ತುಗಳ ವಿರುದ್ಧ ಸಾರ್ವಜನಿಕರಿಗಾಗಿ ವ್ಯಾಪಕ ಜಾಗೃತಿ ಕಾರ್ಯಕ್ರಮ ರೂಪಿಸಿ; ಶಾಲಾ ಕಾಲೇಜುಗಳ ವಿದ್ಯಾರ್ಥಿ, ಶಿಕ್ಷಕ ಮತ್ತು ಪಾಲಕರಲ್ಲಿ ಸಮನ್ವಯ ಸಾಧಿಸಿ:ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ  ಮಾ.29: ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ಅಪರಾಧ ಚಟುವಟಿಕೆ ಆಗಿದ್ದು, ಈ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವದಕ್ಕಾಗಿ ಸರಣಿ ಕಾರ್ಯಕ್ರಮಗಳನ್ನು ಸಂಘಟಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ನಿನ್ನೆ (ಮಾ.28) ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ನಾರ್ಕೋ (ಎನ್- ಕೊರ್ಡ್) ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಡ್ರಗ್ಸ್ ದಂದೆ ತಡೆಯಲು ಮತ್ತು ಯುವ ಸಮೂಹವನ್ನು ಮಾದಕ ವಸ್ತಗಳ ಜಾಲದಿಂದ ದೂರವಿಡಲು ಎಲ್ಲರ ಸಹಕಾರವು ಬೇಕು. ವಿಶೇಷವಾಗಿ ವಿದ್ಯಾರ್ಥಿಗಳ, ಪಾಲಕರ ಮತ್ತು ಶಿಕ್ಷಕರ ಮಧ್ಯದಲ್ಲಿ ಉತ್ತಮ ಸಂಪರ್ಕ ಮತ್ತು ಸಮನ್ವಯ ಸಾಧಿಸಬೇಕು. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭದಲ್ಲಿ ಪ್ರತಿ ಶಾಲಾ ಕಾಲೇಜುಗಳಲ್ಲಿ ನೂತನ ವಿದ್ಯಾರ್ಥಿಗಳಿಗೆ ಆಯೋಜಿಸುವ ಸ್ವಾಗತ ಸಮಾರಂಭದಲ್ಲಿ ವಿದ್ಯಾರ್ಥಿ ಮತ್ತು ಪಾಲಕರ ಸಮಾವೇಶ ಮಾಡಿ, ಡ್ರಗ್ಸ್ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಪೆÇಲೀಸ್ ಮತ್ತು ಕಾಲೇಜು ಶಿಕ್ಷಣ ಇಲಾಖೆ ಈ ಕುರಿತು ಕ್ರಿಯಾ ಯೋಜನೆ ರೂಪಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕೆಲವು ಔಷಧಿ ಅಂಗಡಿಗಳಲ್ಲಿ ನಿಷೇಧಿತ ಮಾತ್ರೆ, ಅನುಮತಿ ಇಲ್ಲದ ಔಷಧಿಗಳನ್ನು ಮಾರಾಟ ಮಾಡುತ್ತಾರೆ ಎಂಬ ಮಾಹಿತಿ ಇದೆ. ಔಷಧಿ ನಿಯಂತ್ರಣ ಇಲಾಖೆ ಅಧಿಕಾರಿಗಳು ತಪಾಸಣೆ ಮಾಡಿ, ಅಂತಹ ಪ್ರಕರಣಗಳು ಕಂಡುಬಂದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಿ, ಔಷಧಿ ಅಂಗಡಿ ಸೀಜ್ ಮಾಡಲು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ಡ್ರಗ್ಸ್ದಂತಹ ವ್ಯಸನಗಳ ಬಗ್ಗೆ ಜಾಗೃತಿ ಮೂಡಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ತಮ್ಮ ಇಲಾಖಾ ಕಾರ್ಯಕ್ರಮಗಳಲ್ಲಿ ಇತಂಹ ಒಂದು ಅಜೆಂಡಾ ಮಾಡಿಕೊಂಡು ಮಾದಕವಸ್ತು ವಿರೋಧಿ ಧ್ವನಿಗೆ ವ್ಯಾಪಕ ಪ್ರಚಾರ ನೀಡಬೇಕು ಎಂದರು.
ಶಾಲಾ ಕಾಲೇಜುಗಳಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳನಿಷೇಧ ಕುರಿತು ಸ್ಪರ್ಧೆಗಳನ್ನು ಆಯೋಜಿಸಬೇಕು ಮತ್ತು ಎಲ್ಲ ಶಾಲಾ ಕಾಲೇಜುಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾ ಪೆಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಅವರು ಮಾತನಾಡಿ, ಪೆÇಲೀಸ್ ಇಲಾಖೆಯಿಂದ ಧಾರವಾಡ ಗ್ರಾಮೀಣ ಜಿಲ್ಲೆ ಹಾಗೂ ಮಹಾನಗರ ವ್ಯಾಪ್ತಿಯ ವೈದ್ಯಕೀಯ, ಇಂಜನೀಯರಿಂಗ್, ತಾಂತ್ರಿಕ ಕಾಲೇಜುಗಳಲ್ಲಿ ಮಾದಕವ್ಯಸನ ಬಳಕೆಯ ದುಷ್ಪರಿಣಾಮಗಳ ಕುರಿತು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಶಯ ಬಂದ ಪ್ರಕರಣಗಳಲ್ಲಿ ತಪಾಸಣೆ ಸಹ ಮಾಡಲಾಗಿದೆ. ಮಾದಕವ್ಯಸನ ಸರಬರಾಜು ಮಾಡುವ ಪೆಡ್ಲರ್ಗಳನ್ನು ಮತ್ತು ಡ್ರಗ್ಸ್ ಸೇವಿಸುವವರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ದಿನಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಾಗೂ ತಪಾಸಣೆಗಳನ್ನು ತೀವ್ರಗೊಳಿಸಿ, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುವದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ, ಇನಸ್ಪೆಕ್ಟರ್ ಶಿವಾನಂದ ಕಟಗಿ ಮತ್ತು ವಿಜಯಕುಮಾರ ಪಾಟೀಲ ಸೇರಿದಂತೆ ವಿವಿಧ ಕಾಲೇಜುಗಳ ಕೋರ್ಡಿನೇಟರಗಳು ಮಾತನಾಡಿದರು.
ಸಭೆಯಲ್ಲಿ ಹುಬ್ಬಳ್ಳಿ ವಿಶ್ವವಿದ್ಯಾಲಯ ತಂತ್ರಜ್ಞಾನ ಕೆ.ಎಲ್.ಇ ಯ ಡೀನ್ ಡಾ. ಸಂಜಯ. ವ್ಹಿ. ಕೊಟಬಾಗಿ, ಕರ್ನಾಟಕ ವಿಶ್ವವಿದ್ಯಾಲಯದ ಸ್ಟುಡೆಂಟ್ ವೆಲ್ಫೇರ್ನ ಡೀನ್ ಡಾ. ಎಸ್.ಕೆ.ಪವಾರ, ಧಾರವಾಡ ವಾಲ್ಮೀ ಡಾ. ಪ್ರಮೋದ ಎಫ್.ಎಸ್.ಯು., ಯು.ಎ.ಎಸ್. ಡೀನ್ ಡಾ. ಸರೋಜಿನಿ ಜೆ.ಕರಕಣ್ಣವರ, ಐಐಐಟಿಯ ಡಾ. ದರ್ಶನ ಎನ್.ಎಸ್., ಹುಬ್ಬಳ್ಳಿ ಕಿಮ್ಸ ಕಾಲೇಜಿನ ಡೀನ್ ಡಾ. ಕೆ.ಎಫ್. ಕಮ್ಮಾರ, ಧಾರವಾಡ ನಗರ ಸಾರಿಗೆ, ವಾಕರಸಾಸಂ ವಿಭಾಗೀಯ ನಿಯಂತ್ರಣ ಅಧಿಕಾರಿ ಡಾ. ಚೆನ್ನಪ್ಪಗೌಡರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಕಿರಣಕುಮಾರ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಪ್ರಾದೇಶಿಕ ಅರಣ್ಯ ಇಲಾಖೆಯ ಡಿ.ಸಿ.ಎಫ್. ವಿವೇಕ ಟಿ. ಕವರಿ, ಸಹಾಯಕ ಔಷಧಿ ನಿಯಂತ್ರಕ ಅಜಯ ಮುದಗಲ್ಲ, ಅಬಕಾರಿ ಉಪ ಆಯುಕ್ತ ಅರುಣಕುಮಾರ ಕೆ., ಐಐಟಿಯ ಡಾ.ಕೀರ್ತಿಕುಮಾರ, ಎ.ಸಿ ಕಚೇರಿಯ ತಹಶೀಲ್ದಾರ ಪಿ.ಎ.ಪಾಟೀಲ, ಆರೋಗ್ಯ ಅಧಿಕಾರಿ ಡಾ. ಮಂಜುನಾಥ. ಎಸ್., ಎಸ್.ಡಿ.ಎಮ್ ವೈಧ್ಯಕೀಯ ವಿದ್ಯಾಲಯದ ಕ್ಲೆಮೆಂಟ್ ಚೆಲ್ಲಿ, ಡಿಮ್ಹಾನ್ಸ್ನ ಸಹಾಯಕ ಪ್ರಾಧ್ಯಾಪಕ ಮಹೇಶ ಮಹಾದೇವಯ್ಯ, ಹುಬ್ಬಳ್ಳಿ ನಗರ ಸಾರಿಗೆ ವಾಕರಸಾಸಂ ವಿಭಾಗೀಯ ನಿಯಂತ್ರಣ ಅಧಿಕಾರಿ ರಾಮನಗೌಡಾ, ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಶ್ರೀನಿವಾಸ ಹಾಗೂ ಡಿಐಸಿ ಬೀಮಪ್ಪ ಅವರು ಉಪಸ್ಥಿತಿರಿದ್ದರು.

Share This Article
error: Content is protected !!
";