ವ್ಯಾಪಕ ಮಳೆ: ಖಾನಾಪುರ ತಾಲ್ಲೂಕಿಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಭೇಟಿ

Vijayanagara Vani
ವ್ಯಾಪಕ ಮಳೆ: ಖಾನಾಪುರ ತಾಲ್ಲೂಕಿಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಭೇಟಿ
ಬೆಳಗಾವಿ, ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಹಿರಿಯ ಅಧಿಕಾರಿಗಳು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಅವರು ಜತೆಗಿದ್ದರು.
ಖಾನಾಪೂರ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಸ್ತುತದ ಸ್ಥಿತಿಗತಿ ಬಗ್ಗೆ, ಸಂಚಾರ ವ್ಯವಸ್ಥೆಯ ಬಗ್ಗೆ ಹಾಗೂ ನದಿ ಹಾಗೂ ಹೊಳೆಗಳ ನೀರಿನ ಮಟ್ಟ ಪರಿಶೀಲಿಸಿದರು.
ತಾಲೂಕಿನಲ್ಲಿನ ಕುಸುಮಳಿ ಗ್ರಾಮದಲ್ಲಿನ ಸೇತುವೆ ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನವನ್ನು ನೀಡಿದರು.
WhatsApp Group Join Now
Telegram Group Join Now
Share This Article
error: Content is protected !!