ಇಂಜಿನಿಯರ್​ಗಳ ದಿನಾಚರಣೆ ಹಿಂದಿನ ಮಹತ್ವವೇನು?ಆಚರಣೆ ಏಕೆ ಗೊತ್ತೇ?

Vijayanagara Vani
ಇಂಜಿನಿಯರ್​ಗಳ ದಿನಾಚರಣೆ ಹಿಂದಿನ ಮಹತ್ವವೇನು?ಆಚರಣೆ ಏಕೆ ಗೊತ್ತೇ?

ಸರ್‌. ಎಂ. ವಿಶ್ವೇಶ್ವರಯ್ಯ ಅವರು ಸೆಪ್ಟೆಂಬರ್ 15-1861 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಜನಿಸಿದರು. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಸಾಧನೆ ಯಾವಾಗಲು ಶಾಶ್ವತವಾಗಿರುತ್ತದೆ. ಪುಣೆಯ ಇಂಜಿನಿಯರಿಂಗ್ ಕಾಲೇಜಿನಿಂದ ಪದವಿ ಪಡೆದ ವಿಶ್ವೇಶ್ವರಯ್ಯ ಅವರು ತಮ್ಮ ಆಸಕ್ತಿಯ ಕ್ಷೇತ್ರಗಳಾದ ನೀರಾವರಿ ಹಾಗೂ ಪ್ರವಾಹ ತಡೆ ಯೋಜನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ

ಇಂದು ಸೆಪ್ಟೆಂಬರ್ 15 ಇಂಜಿನಿಯರ್ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್‌ ದಿನವನ್ನು ಆಚರಿಸಲಾಗುತ್ತದೆ. ದೇಶ ಕಂಡ ಅಪ್ರತಿಮ ಇಂಜಿನಿಯರ್, ಭಾರತ ರತ್ನ ಸರ್‌. ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಸ್ಮರಣಾರ್ಥ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ.

ಇಂಜಿನಿಯರ್ ದಿನವನ್ನು ಮೊದಲ ಬಾರಿಗೆ 1968, ಸೆಪ್ಟೆಂಬರ್ 15 ರಂದು ಆಚರಣೆ ಮಾಡಲಾಯಿತು. ಅಂದಿನಿಂದ ಪ್ರತಿವರ್ಷ ಸೆಪ್ಟೆಂಬರ್ 15 ರಂದು ಭಾರತದಲ್ಲಿ ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಇಂಜಿನಿಯರ್‌ ದಿನವನ್ನು ಆಚರಣೆ ಮಾಡುವ ಮೂಲಕ ವಿಶ್ವೇಶ್ವರಯ್ಯ ಅವರ ಜೀವನವನ್ನು ಮತ್ತು ಅವರು ಮಾಡಿದ ಸಾಧನೆಯನ್ನು ಸ್ಮರಿಸಿಕೊಳ್ಳಲಾಗುತ್ತದೆ.


ಸರ್‌. ಎಂ. ವಿಶ್ವೇಶ್ವರಯ್ಯ ಅವರು ಸೆಪ್ಟೆಂಬರ್ 15,1861 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಜನಿಸಿದರು. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಸಾಧನೆ ಯಾವಾಗಲು ಶಾಶ್ವತವಾಗಿರುತ್ತದೆ. ಪುಣೆಯ ಇಂಜಿನಿಯರಿಂಗ್ ಕಾಲೇಜಿನಿಂದ ಪದವಿ ಪಡೆದ ವಿಶ್ವೇಶ್ವರಯ್ಯ ಅವರು ತಮ್ಮ ಆಸಕ್ತಿಯ ಕ್ಷೇತ್ರಗಳಾದ ನೀರಾವರಿ ಹಾಗೂ ಪ್ರವಾಹ ತಡೆ ಯೋಜನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ.

ಪುಣೆಯ ಖಡಕ್‌ ವಾಸ್ಲ ಜಲಾಶಯದಲ್ಲಿ 1903 ರಲ್ಲಿ ನಿರ್ಮಿಸಿದ ಅಟೋಮ್ಯಾಟಿಕ್ ಬ್ಯಾರಿಯರ್ ವಾಟರ್ ಫ್ಲಡ್‌ಗೇಟ್‌ಗಳ ನಿರ್ಮಾಣದ ಹಿಂದೆ ವಿಶ್ವೇಶ್ವರಯ್ಯ ಅವರ ಕೊಡುಗೆ ಅಪಾರವಾಗಿದೆ. ಇದರ ನಂತರ ವಿಶ್ವೇಶ್ವರಯ್ಯ ಅವರು 1917 ರಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಸ್ಥಾಪನೆಗೂ ಅವರೇ ಮುಖ್ಯ ಕಾರಣರಾಗಿದ್ದು, ಅದು ಮುಂದೆ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್‌ ಆಫ್‌ ಇಂಜಿನಿಯರಿಂಗ್ ಎಂದು ಹೆಸರು ಪಡೆಯಿತು.


ಕಾವೇರಿಗೆ ಅಡ್ಡಲಾಗಿ ಮಂಡ್ಯ ಜಿಲ್ಲೆಯಲ್ಲಿ ಕಟ್ಟಲಾದ ಕೃಷ್ಣರಾಜ ಸಾಗರ ಅಣೆಕಟ್ಟು ಸರ್. ಎಂ ವಿಶ್ವೇಶ್ವರಯ್ಯನವರ ಶ್ರಮದ ಫಲ. ಮೈಸೂರಿನಲ್ಲಿ ನಾಲ್ಕನೇ ಕೃಷ್ಣರಾಜ ಒಡೆಯರ್ ಆಳ್ವಿಕೆಯ ಕಾಲದಲ್ಲಿ ದಿವಾನರಾಗಿದ್ದ ವಿಶ್ವೇಶ್ವರಯ್ಯನವರು, ದೂರದೃಷ್ಟಿಯುಳ್ಳ ಅನೇಕ ಕೆಲಸ ಕಾರ್ಯಗಳನ್ನು ಮಾಡಿದ್ದರು

1934 ರಲ್ಲಿ ಭಾರತದ ಆರ್ಥಿಕತೆಗೆ ಸಂಬಂಧಿಸಿದಂತೆ ಅನೇಕ ಯೋಜನೆಗಳನ್ನು ರೂಪಿಸಿದ ಸಮಿತಿಯಲ್ಲೂ ಅವರ ಪಾತ್ರವಿತ್ತು. ವಿಶ್ವೇಶ್ವರಯ್ಯ ಅವರು ಜಲಾಶಯ ನಿರ್ಮಾಣ, ತೂಗು ಸೇತುವೆ ನಿರ್ಮಾಣದಿಂದ ಹಿಡಿದು ಸಮಾಜಕ್ಕೆ ನೆರವಾಗುವಂತಹ ಅದೆಷ್ಟೋ ಉತ್ತಮ ಕಾರ್ಯಗಳನ್ನು ತಮ್ಮ ಜೀವಿತಾವಧಿಯಲ್ಲಿ ಮಾಡಿದ್ದಾರೆ

ಜಲ ವಿದ್ಯುತ್ತ ಶಕ್ತಿ ಯೋಜನೆಯ ಹಿಂದೆಯೂ ವಿಶ್ವೇಶ್ವರಯ್ಯ ಅವರ ಪಾತ್ರ ಪ್ರಮುಖವಾಗಿತ್ತು. ಕರ್ನಾಟಕದಲ್ಲಿ ಕೃಷ್ಣ ರಾಜ ಸಾಗರ ಜಲಾಶಯ ನಿರ್ಮಿಸುವುದರಿಂದ ಹಿಡಿದು ಹೈದರಾಬಾದ್‌ನಲ್ಲಿ ಪ್ರವಾಹ ತಡೆಗಟ್ಟುವಿಕೆ ಯೋಜನೆ ರೂಪಿಸುವ ತನಕ ಸರ್. ಎಂ ವಿಶ್ವೇಶ್ವರಯ್ಯ ಅವರು ಸಾಧನೆ ಮಾಡಿದ್ದರು. ಅದಕ್ಕಾಗಿಯೇ ಇನ್‌ಸ್ಟಿಟ್ಯೂಟ್‌ ಆಫ್‌ ಇಂಜಿನಿಯರ್ಸ್ ಸಂಸ್ಥೆಯು ಇವರನ್ನ ಭಾರತದ ಆರ್ಥಿಕ ಯೋಜನೆಯ ರೂವಾರಿ ಎಂಬರ್ಥದಲ್ಲಿ ಕರೆದಿದೆ.

ವಿಶ್ವೇಶ್ವರಯ್ಯ ಅವರ ಸಾರ್ವಜನಿಕ ಸೇವೆಯನ್ನು ನೋಡಿ ನೈಟ್‌ ಕಂಮಾಡರ್ ಆಫ್‌ ದಿ ಬ್ರಿಟಿಷ್ ಇಂಡಿಯನ್ ಎಂಪಾಯರ್ ( Knight commander of the British Indian empire) ಎಂಬ ಬಿರುದನ್ನು ನೀಡಲಾಯಿತು. 1955 ರಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

WhatsApp Group Join Now
Telegram Group Join Now
Share This Article
error: Content is protected !!