Ad image

ಆ.01 ರಂದು “ಜಾನಪದ ಸಂಗೀತ” ಕಲಿಕಾ ತರಬೇತಿ ಕಾರ್ಯಕ್ರಮ

Vijayanagara Vani
ಬಳ್ಳಾರಿ,ಜು.30
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿಯರಿಗೆ ಆ.01 ರಂದು ಸಂಜೆ 05 ಗಂಟೆಗೆ ನಗರದ ಕೋಟೆಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ “ಜಾನಪದ ಸಂಗೀತ” ಕಲಿಕಾ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಲಬುರಗಿ ವಲಯದ ಕಲಬುರಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದಪ್ಪ ಅವರು ಅಧ್ಯಕ್ಷತೆ ವಹಿಸುವರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ವರಿ.ಬಿ ಮುಖ್ಯ ಅತಿಥಿಗಳಾಗಿ ತರಬೇತಿದಾರರಾಗಿ ಜಾನಪದ ಗಾಯಕ ಎಸ್.ಎಂ. ಹುಲುಗಪ್ಪ ಸೇರಿದಂತೆ ಇತರರು ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

Share This Article
error: Content is protected !!
";