Ad image

ಕವಿಗಳ ಕವಿ ಮಹರ್ಷಿ ವಾಲ್ಮೀಕಿ ಜಯಂತಿ ಯಲ್ಲಿ ಆಹಾರ ಸಚಿವ ಕೆಹೆಚ್. ಮುನಿಯಪ್ಪ ಬಾಗಿ.

Vijayanagara Vani
ಕವಿಗಳ ಕವಿ ಮಹರ್ಷಿ ವಾಲ್ಮೀಕಿ ಜಯಂತಿ ಯಲ್ಲಿ ಆಹಾರ ಸಚಿವ ಕೆಹೆಚ್. ಮುನಿಯಪ್ಪ ಬಾಗಿ.

ವಿಧಾನ ಸೌಧ.17ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಶ್ರೀ ಮಹರ್ಶಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪನವರು ಭಾಗವಹಿಸಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಸಮುದಾಯದ ಬಂದುಗಳಿಗೆ ಜಯಂತಿಯ ಶುಭಾಶಯಗಳನ್ನು ಕೋರುತ್ತಾ.

ಕೇಂದ್ರದಲ್ಲಿ ನಾನು ಸಚಿವನಿದ್ದಾಗ ಕೋಲಾರ ಲೋಕಸಭಾ ಕ್ಷೇತ್ರದ ದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮಂತ್ರಿ ಹೆಚ್ ಆಂಜನೇಯ ರವರ ಸಹಕಾರದಿಂದ 4 ಮಹರ್ಷಿ ವಾಲ್ಮೀಕಿ ಹಾಸ್ಟೆಲ್ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಯಿತು

ಇದರಿಂದು ಹಲವಾರು ಬಡ ಕುಟುಂಬದ ಮಕ್ಕಳಿಗೆ ವಿಧ್ಯಾಭ್ಯಾಸ ಮಾಡಲು ಅನುಕೂಲ ಮಾಡಿಕೊಡಲಾಗಿದೆ ಅಂದಿನಿಂದ ಇಂದಿನವರೆಗೂ ಹಳ್ಳಿಗಳಲ್ಲಿ ಯಾವುದೇ ಸಮಸ್ಯಗಳು ಇದ್ದಲ್ಲಿ ವಾಲ್ಮೀಕಿ ಸಮಾಜದವರು ತಾಯಿ ಸ್ಥಾನದಲ್ಲಿದ್ದು ಸಹಕರಿಸಿತ್ತಾರೆ

ಅವರೊಂದಿಗೆ ನಮ್ಮ ಸಮುದಾಯ ಜೊತೆಗಿದ್ದು ಮಾನ್ಯ ಮುಖ್ಯಮಂತ್ರಿ ಗಳ ಕೈ ಬಲಪಡಿಸಿ ಅವರ ಪರವಾಗಿ ನಮ್ಮ ಸಮುದಾಯಗಳು ಇರುತ್ತವೆ ತಾವು ಇನ್ನಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮುದಾಯಗಳಿಗೆ ಕಲ್ಪಿಸಿ ಸಮುದಾಯಗಳ ಬೆಳವಣಿಗೆಗೆ ಸಹಕರಿಸಬೇಕು ಎಂದರು.

ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾ ನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ,, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.‌

Share This Article
error: Content is protected !!
";