ಜಿಲ್ಲಾ ಬಾಲಕಾರ್ಮಿಕ ಅಧಿಕಾರಿಗಳಿಂದ ತಪಾಸಣೆ: ಒಬ್ಬ ಬಾಲಕಾರ್ಮಿಕನ ರಕ್ಷಣೆ

Vijayanagara Vani
ಜಿಲ್ಲಾ ಬಾಲಕಾರ್ಮಿಕ ಅಧಿಕಾರಿಗಳಿಂದ ತಪಾಸಣೆ: ಒಬ್ಬ ಬಾಲಕಾರ್ಮಿಕನ ರಕ್ಷಣೆ

ರಾಯಚೂರು, ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಟಾಸ್ಕ್ ಪೋರ್ಸ್ ಸಮಿತಿಯ ಅಧಿಕಾರಿಗಳಿಂದ ನಗರದ ವಿವಿಧ ಹೋಟೆಲ್‌ಗಳು, ಕಿರಾಣಿ ಅಂಗಡಿಗಳು, ಬೇಕರಿಗಳು, ಗ್ಯಾರೇಜ್‌ಗಳು, ಬಾರ್ ಆ್ಯಂಡ್ ರೆಸ್ಟೋರೆಂಟ್ ಸೇರಿದಂತೆ ಇನ್ನಿತರೆ ಕಡೆ ತಪಾಸಣೆ ಮಾಡಿ ಒಬ್ಬ ಬಾಲ ಬಾಲಕಾರ್ಮಿಕನ್ನು ರಕ್ಷಣೆ ಮಾಡಿದ್ದು, ಈ ಕುರಿತು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಆಶಾಪೂರು ರಸ್ತೆಯ ಪದ್ಮಾವತಿ ಕಾಲೋನಿಯ ವೀರಭದ್ರೇಶ್ವರ ಹೋಟೆಲ್ ಮತ್ತು ಖಾನಾವಳಿ ಮಾಲೀಕರಾದ ವಿಶ್ವನಾಥಸ್ವಾಮಿ ಅವರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲೆ ಮಾಡಲಾಗಿದೆ.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016ರಂತೆ 14ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ 15ರಿಂದ 18ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ದುಡಿಸಿಕೊಂಡಲ್ಲಿ 50,000/-ರೂ.ಗಳ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ ಇರುತ್ತದೆ.

ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ದುಡಿಯುವ ಮಕ್ಕಳು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ-1098ಗೆ ಮಾಹಿತಿ ನೀಡಬಹುದಾಗಿದೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ, ಕಾರ್ಮಿಕ ನಿರೀಕ್ಷಕರಾದ ಪರಶುರಾಮ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಹುಸೇನ್ ಬಾಷಾ, ಜಿಲ್ಲಾ ಮಕ್ಕಳ ರಕ್ಷಣ ಘಟಕದ ಸಿಬ್ಬಂದಿಗಳಾದ ತಿಕ್ಕಯ್ಯ, ತಾಯ್‌ರಾಜ್, ಮಹೇಶ, ಮುಕ್ಕಣ್ಣ ಹಾಗೂ ಗೋಪಾಲ್ ಸೇರಿದಂತೆ ಇತರರು ಇದ್ದರು.

WhatsApp Group Join Now
Telegram Group Join Now
Share This Article
error: Content is protected !!