ಬಳ್ಳಾರಿ,ಅ.09
ಕಂಪ್ಲಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ವತಿಯಿಂದ ಸಾವಯವ ಕೃಷಿ, ನೈಸರ್ಗಿಕ ಕೃಷಿ, ತೋಟಗಾರಿಕೆ ಹಾಗೂ ಹೈನುಗಾರಿಕೆ ಕುರಿತು ಅ.16 ರಿಂದ ಅ.18 ರವರೆಗೆ ಮೂರು ದಿನಗಳ ವಿಶೇಷ ಸಾಂಸ್ಥಿಕ ತರಬೇತಿ ಕಾರ್ಯಕ್ರಮವನ್ನು ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ರೈತರು, ಮಹಿಳಾ ರೈತರು ನೋಂದಾಯಿಸಿಕೊಳ್ಳಬಹುದು.
ತರಬೇತಿಗೆ ಭಾಗವಹಿಸುವ ರೈತರಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಇದ್ದು, ಆಸಕ್ತಿಯುಳ್ಳ ರೈತರು ಜಮೀನಿನ ಎಫ್.ಐ.ಡಿ ಸಂಖ್ಯೆ ಅಥವಾ ಆಧಾರ್ ಸಂಖ್ಯೆಯೊ0ದಿಗೆ ನೋಂದಣಿ ಮಾಡಿಕೊಳ್ಳಬಹುದು.
ಹೆಸರನ್ನು ನೊಂದಾಯಿಸಿಕೊಳ್ಳಲು ಇಚ್ಛಿಸುವವರು ಕೃಷಿ ಅಧಿಕಾರಿ ಯೇಸುಬಾಬು-ಮೊ.6360645255 ಮತ್ತು ಸಹಾಯಕ ಕೃಷಿ ನಿರ್ದೇಶಕಿ ವಿದ್ಯಾವತಿ ಹೊಸಮನಿ-ಮೊ.7353533138 ಗೆ ಸಂಪರ್ಕಿಸಬಹುದು ಎಂದು ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.