ಕಾರಟಗಿ : ತುಂಗಾಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್-20ರವರೆಗೆ ನೀರು ಬಿಡಲು ಒತ್ತಾಯಿಸಿ ಹಾಗೂ ರೈತರ ಬೆಳೆಗಳಿಗೆ ಸಮರ್ಪಕವಾಗಿ ನೀರು ಹರಿಸದೆ ರೈತರನ್ನು ಕಡೆಗಣಿಸಿದ ಸಚಿವರಾದ ಶಿವರಾಜ ಎಸ್ ತಂಗಡಗಿ ರಾಜೀನಾಮೆಗೆ ಒತ್ತಾಯಿಸಿ ಕಾರಟಗಿಯಲ್ಲಿ ಏಪ್ರಿಲ್-09ರಂದು ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದಿಂದ ಬೃಹತ್ ರೈತರ ಹೋರಾಟ ನಡೆಯಿತು.
2024ರ ಜುಲೈ, ಆಗಸ್ಟ್ ತಿಂಗಳಿನಲ್ಲಿ 100 ಟಿಎಂಸಿ ನೀರು ತುಂಬಿದ ತುಂಗಭದ್ರಾ ಜಲಾಶಯದಿಂದ ರಾಜ್ಯ ಸರ್ಕಾರ ರೈತರ ಎರಡು ಬೆಳೆಗಳಿಗೆ ಸಮರ್ಪಕ ನೀರು ಒದಗಿಸಬಹುದಾಗಿತ್ತು ಆದರೆ ಹಿಂಗಾರು ಹಂಗಾಮಿಯ ಎರಡನೆಯ ಬೇಸಿಗೆ ಬೆಳೆಗೆ ಎಡದಂಡೆ ಭಾಗದ ಪಾಲಿನ ನೀರು ಇದ್ದರೂ ಕೂಡ ರೈತರ ಬೆಳೆಗಳಿಗೆ ನೀರು ಹರಿಸಲು ತುಂಗಭದ್ರಾ ನೀರಾವರಿ ಅಧಿಕಾರಿಗಳು ಮತ್ತು ಸಚಿವರಾದ ಶಿವರಾಜ ಎಸ್ ತಂಗಡಗಿ ಅವರಿಂದ ಉದಾಸೀನತೆ ಮತ್ತು ನಿರ್ಲಕ್ಷ ವಹಿಸಲಾಗುತ್ತಿದೆ. ಅದರಲ್ಲೂ ನೀರಾವರಿ ಸಲಹಾ ಸಮಿತಿಗಳನ್ನು ಕಾಡ ಕಚೇರಿಯಲ್ಲಿ ನಡೆಸದೆ ರೈತರನ್ನು ಕಡೆಗಣಿಸಿ ಬೆಂಗಳೂರಲ್ಲಿ ನಡೆಸಿ ನೀರಿನ ಹಂಚಿಕೆಯ ತಪ್ಪು ಲೆಕ್ಕಗಳನ್ನು ನೀಡಿ ಅನ್ನದಾತರನ್ನು ಒಕ್ಕಲಿಬ್ಬಿಸುವ ಹುನ್ನಾರ ನಡೆಸಲಾಗುತ್ತಿದೆ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಜಲಾಶಯದ ಮೇಲ್ಭಾಗದ ಕಾರ್ಖಾನೆಗಳಿಗೆ ಮಾರಾಟ ಮಾಡುತ್ತಿದ್ದಾರೆ ಈ ಕುರಿತು ಕೂಡಲೇ ನೀವುಗಳು ತುಂಗಭದ್ರಾ ಜಲಾಶಯದ ನೀರು ಹಂಚಿಕೆಯಲ್ಲಿ ಆಗುತ್ತಿರುವ ಅಕ್ರಮಗಳ ಕುರಿತು ವಿಶೇಷ ತನಿಖಾ ತಂಡವನ್ನು ರಚನೆ ಮಾಡಿ ಎಡದಂಡೆ ಭಾಗದ ರೈತರಿಗೆ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಮರ್ಪಕ ನೀರು ನೀಡಲು ಕ್ರಮ ಕೈಗೊಳ್ಳಬೇಕು. ತುಂಗಭದ್ರಾ ಜಲಾಶಯದ ಎಡದಂಡೆ ಭಾಗದಲ್ಲಿ ಮುನಿರಾಬಾದ್ ನಿಂದ ರಾಯಚೂರುವರೆಗೆ ಸುಮಾರು 100ಕ್ಕೂ ಅಧಿಕ ಉಪ ಕಾಲುವೆಗಳು ಇದ್ದು ಪ್ರತಿಯೊಂದು ಉಪ ಕಾಲುವೆಗಳ ಕೊನೆ ಭಾಗದ ರೈತರಿಗೆ ಬೆಳೆ ಕೈಗೆ ಬರಬೇಕಾದರೆ ಇನ್ನೂ 15 ರಿಂದ 20 ದಿನಗಳು ಬೇಕಾಗುತ್ತದೆ ಆದರೆ ರಾಜ್ಯ ಸರ್ಕಾರ 123ನೇಯ ನೀರಾವರಿ ಸಲಹಾ ಸಮಿತಿಯಲ್ಲಿ ಏಪ್ರಿಲ್-10ವರೆಗೆ ನೀರು ಬಿಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಇದು ರೈತರ ಬದುಕಿಗೆ ಬರೆ ಎಳೆದಂತೆ ಆಗುತ್ತದೆ. ಒಂದು ವೇಳೆ ಏಪ್ರಿಲ್ 10ಕ್ಕೆ ನೀರು ಬಂದ್ ಮಾಡಿದರೆ ಲಕ್ಷಾಂತರ ರೈತರು ಸಾಲದ ಸುಳಿಯಲ್ಲಿ ಸಿಲುಕುತ್ತಾರೆ. ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ, ರೈತರ ಮೇಲೆ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತದೆ, ಇದನ್ನು ತಡೆಯ ಬೇಕಾದರೆ ಏಪ್ರಿಲ್-20 ವರೆಗೆ ನೀರು ಬಿಡಬೇಕು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿಯವರು ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು ರೈತರ ಪರ ಇರುವ ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸುವಲ್ಲಿ ವಿಫಲರಾಗಿದ್ದಾರೆ, ರೈತರ ಪರ ಯೋಜನೆಗಳನ್ನು ಕಾರ್ಯಕತಗೊಳಿಸುವಲ್ಲಿ ನಿರ್ಲಕ್ಷ ವಹಿಸಿದ್ದಾರೆ. ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್ 20ವರೆಗೆ ನೀರು ಬಿಡಬೇಕು. ಒಂದು ವೇಳೆ ನೀರು ಬಿಡದೇ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಯಂತಹ ಘಟನೆಗಳು ನಡೆದರೆ ಅದಕ್ಕೆ ಸರ್ಕಾರ ಮತ್ತು ಸಚಿವ ಶಿವರಾಜ್ ಎಸ್ ತಂಗಡಗಿ ಅವರನ್ನು ನೇರ ಹೊಣೆ ಮಾಡಬೇಕು. ಕೊನೆ ಭಾಗದ ರೈತರ ಬೆಳೆ ಒಣಗಿದರೆ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು. ಎಡದಂಡೆ ಭಾಗದ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು ಭತ್ತ ಖರೀದಿ ಕೇಂದ್ರಗಳು ಸ್ಥಾಪಿಸಬೇಕು. ತುಂಗಭದ್ರಾ ಜಲಾಶಯದ ನೀರು ಹಂಚಿಕೆಯಲ್ಲಿ ಆಗುತ್ತಿರುವ ಅಕ್ರಮಗಳ ಕುರಿತು ವಿಶೇಷ ತನಿಖಾ ತಂಡ ರಚನೆ ಮಾಡಿ ಕ್ರಮ ಕೈಗೊಳ್ಳಬೇಕು. ನೀರಾವರಿ ಭಾಗದಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಜಲಾಶಯದ ನೀರನ್ನು ಕಾರ್ಖಾನೆಗಳಿಗೆ ಮಾರಾಟ ಮಾಡುವ ಅಧಿಕಾರಿಗಳ ರಾಜಕಾರಣಿಗಳ ಮೇಲೆ ಕ್ರಮ ಜರುಗಿಸಬೇಕೆಂದು ಸಂಘಟನಾಕಾರರು ಒತ್ತಾಯಿಸಿದರು.