ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್ ಮಂಡನೆ ಆರಂಭವಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಐತಿಹಾಸಿಕ ಸತತ 7ನೇ ಆಯವ್ಯಯ ಪ್ರಸ್ತುತಪಡಿಸುತ್ತಿದ್ದಾರೆ.
ಕೃಷಿ ಕ್ಷೇತ್ರಕ್ಕೆ 1.05 ಲಕ್ಷ ಕೋಟಿ ರೂ. ಘೋಷಣೆ : ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ 1.05 ಲಕ್ಷ ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.
-
1 ಕೋಟಿ ರೈತರಿಗೆ ನೈಸರ್ಗಿಕ ಕೃಷಿ ತರಬೇತಿ
-
ಡಿಜಿಟಲ್ ಮೂಲಕ ಬೆಳೆ ಸರ್ವೆ ಮಾಡಿಸಲು ಕ್ರಮ
-
ಸಾಸಿವೆ, ಸೂರ್ಯಕ್ರಾಂತಿ, ಕಡಲೆಯಾಯಿ,ಎಣ್ಣೆ ಉದ್ಯಮಕ್ಕೆ ಹೆಚ್ಚು ಒತ್ತು
-
ತರಕಾರಿ ಬೆಳೆಗಳ ಉತ್ತೇಜಕ್ಕೆ ಆರ್ಥಿಕ ನೆರವು