ಬಾಗಲಕೋಟೆಯಲ್ಲಿ ಒಂದೇ ದಿನ ಮೋದಿ, ಸಿದ್ದರಾಮಯ್ಯ ಪ್ರಚಾರ

khushihost
By khushihost
ಬಾಗಲಕೋಟೆಯಲ್ಲಿ ಒಂದೇ ದಿನ ಮೋದಿ, ಸಿದ್ದರಾಮಯ್ಯ ಪ್ರಚಾರ

ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ದಿನ ಪ್ರಚಾರ ಕೈಗೊಂಡಿದ್ದಾರೆ.

ಏಪ್ರಿಲ್ 29ರಂದು ಬಾಗಲಕೋಟೆ ನವನಗರದಲ್ಲಿ ಪ್ರಧಾನಿ ಮತ್ತು ಮುಖ್ಯಮಂತ್ರಿಗಳ ಪ್ರಚಾರ ಸಭೆ ನಿಗದಿಯಾಗಿದೆ. ಏಪ್ರಿಲ್ 29ರಂದು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಮೋದಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

ಅದೇ ದಿನ ಸಂಜೆ 6 ಗಂಟೆಗೆ ನಡೆಯುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!