Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ: ಹಿಂಗಾರು, ಬೇಸಿಗೆ ಹಂಗಾಮಿನ ಬೆಳೆವಿಮೆಗೆ ನೋಂದಾಯಿಸಲು ರೈತರಿಗೆ ಸೂಚನೆ --------


ಕೊಪ್ಪಳ ನವೆಂಬರ್ 20): ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಕೊಪ್ಪಳ ತಾಲ್ಲೂಕಿನ ಹೋಬಳಿ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳೆಗಳನ್ನು ಬೆಳೆವಿಮೆಗೆ ನೋಂದಾಯಿಸಲು ರೈತರಿಗೆ ತಿಳಿಸಿದೆ.

ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಮಳೆ ಆಶ್ರಿತ ಹುರಳಿ ಬೆಳೆಗೆ ವಿಮೆ ನೋಂದಾಯಿಸಲು ನವೆಂಬರ್ 15 ಕೊನೆಯ ದಿನವಾಗಿದೆ. ಮಳೆ ಆಶ್ರಿತ ಮತ್ತು ನೀರಾವರಿ ಬೆಳೆಗಳಾದ ಜೋಳ ಹಾಗೂ ಸೂರ್ಯಕಾಂತಿ, ಮಳೆ ಆಶ್ರಿತ ಕುಸುಮೆ ಬೆಳೆಗೆ ವಿಮೆ ನೋಂದಾಯಿಸಲು ಡಿಸೆಂಬರ್ 1 ಕೊನೆಯ ದಿನವಾಗಿದೆ. ಮಳೆ ಆಶ್ರಿತ ಮತ್ತು ನೀರಾವರಿ ಗೋಧಿ ಬೆಳೆಗೆ ವಿಮೆ ನೋಂದಾಯಿಸಲು ಡಿಸೆಂಬರ್ 15 ಕೊನೆಯ ದಿನವಾಗಿದೆ. ಮಳೆ ಆಶ್ರಿತ ಮತ್ತು ನೀರಾವರಿ ಕಡಲೆ ಬೆಳೆಗೆ ವಿಮೆ ನೋಂದಾಯಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಶೇಂಗಾ, ಭತ್ತ ಹಾಗೂ ಸೂರ್ಯಕಾಂತಿಗೆ ವಿಮೆ ನೋಂದಾಯಿಸಲು 2026 ರ ಫೆಬ್ರವರಿ 27 ಕೊನೆಯ ದಿನವಾಗಿದೆ.

ಬೆಳೆವಿಮೆ ಪರಿಹಾರ ಲಾಭ ಪಡೆಯಲು ರೈತರು ಕಡ್ಡಾಯವಾಗಿ ಎಫ್‌ಐಡಿ ಯನ್ನು ಹೊಂದಿರಬೇಕು. ರೈತರು ಬಿತ್ತನೆ ಮಾಡುವ ಬೆಳೆಯನ್ನೇ ನೋಂದಾಯಿಸಬೇಕು. ತಮ್ಮ ಬೆಳೆಯನ್ನು ತಾವೇ ಖುದ್ದಾಗಿ ಬೆಳೆ ಸಮೀಕ್ಷೆಯನ್ನು ಮಾಡಬೇಕು. ತಮ್ಮ ದಾಖಲಾತಿಗಳಾದ ಪಹಣಿ, ಆಧಾರ್ ಕಾರ್ಡ್ ಮತ್ತು ಪಾಸ್‌ಬುಕ್ ಜೆರಾಕ್ಸ್ ಪ್ರತಿಗಳನ್ನು ಯಾವುದೇ ಕಾರಣಕ್ಕೂ ಇನ್ನೊಬ್ಬರಿಗೆ ನೀಡದೆ, ಖುದ್ದಾಗಿ ಬೆಳೆವಿಮೆ ನೋಂದಾಯಿಸಲು ಸೂಚಿಸಿದೆ.

ಪ್ರಸಕ್ತ ಸಾಲಿಗೆ TATA AIG INSURANCE CO LTD, ಕಂಪನಿಯು ಆಯ್ಕೆಯಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚಿತ ಎಲ್ಲಾ ಬೆಳೆಗಳ ಆಯ್ಕೆಗಾಗಿ ಹತ್ತಿರದ ಬ್ಯಾಂಕುಗಳಿಗೆ ಅಥವಾ ಇನ್ಸುರೆನ್ಸ್ ಕಂಪನಿಯ ಪ್ರತಿನಿಧಿ ಅಥವಾ ಟೋಲ್ ಫ್ರೀ ಸಂಖ್ಯೆ: 18002093536 ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್, ಸಂಬಂಧಪಟ್ಟ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ