Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಹಕರ ಪ್ಲ್ಯಾಟ್‍ನ ಮುಂಗಡ ಹಣ ಮರಳಿಸಲು ಶ್ರೀ ಬಾಲಾಜಿ ಡೆವಲಪರ್ಸಗೆ ಜಿಲ್ಲಾ ಗ್ರಾಹಕರ ಆಯೋಗದ ಆದೇಶ





ಧಾರವಾಡ  ಜೂನ್ 19: ಬೆಳಗಾವಿಯ ರಾಮದುರ್ಗದ ನಿವಾಸಿ ಭಾರತಿ ಕೋಟಿ ಎಂಬುವವರು ಎದುರುದಾರರು ಅಭಿವೃದ್ದಿಪಡಿಸುತ್ತಿದ್ದ ಚಿಕ್ಕಮಲ್ಲಿಗವಾಡ ಗ್ರಾಮದ ಲೇಔಟನಲ್ಲಿ ಪ್ಲಾಟ್ ನಂ.150 ನ್ನು ಖರೀದಿಸಲು ಇಚ್ಚಿಸಿದ್ದರು. ಇದರ ಬಗ್ಗೆ ಉಭಯತರ ಮಧ್ಯ ರೂ.3,96,000 ಗಳ ಖರೀದಿ ಕರಾರು ಒಪ್ಪಂದವಾಗಿತ್ತು. ಇದರ ಪೈಕಿ ದೂರುದಾರರು ರೂ.2,52,000 ಗಳನ್ನು ಮುಂಗಡ ಹಣ ಪಾವತಿಸಿದ್ದರು. ಹಣ ಪಾವತಿಸಿದ ದಿನದಿಂದ ಇವತ್ತಿನವರೆಗೂ ಎದುರುದಾರರು ದೂರುದಾರರಿಗೆ ಬಾಕಿ ಹಣ ಪಡೆದು ಖರೀದಿ ಕರಾರು ಮಾಡಿಕೊಟ್ಟಿರಲಿಲ್ಲ ಮತ್ತು ಮುಂಗಡ ಹಣವನ್ನೂ ಸಹ ಮರಳಿ ಕೊಟ್ಟಿರಲಿಲ್ಲ. ಎದುರುದಾರರು ಅಂತಹ ನಡಾವಳಿಕೆಯಿಂದ ತನಗೆ ಮೋಸವಾಗಿದೆ ಮತ್ತು ಅವರು ತನಗೆ ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತಾ ಹೇಳಿ ದೂರುದಾರರು ಎದುರುದಾರರ ವಿರುದ್ಧ ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ದಿ: 06/12/2024 ರಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.



ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗ, ದೂರುದಾರಳಿಂದ ರೂ.2,52,000 ಗಳನ್ನು ಮುಂಗಡ ಹಣ ಪಡೆದುಕೊಂಡು ಪ್ಲಾಟನ್ನು ಅಭಿವೃದ್ದಿಪಡಿಸದೇ ಎದುರುದಾರರು ಗ್ರಾಹಕ ರಕ್ಷಣಾ ಕಾಯಿದೆಯಡಿ ಸೇವಾ ನ್ಯೂನತೆ ಎಸಗಿರುತ್ತಾರೆ ಅಂತಾ ಅಭಿಪ್ರಾಯಪಟ್ಟು, ದೂರುದಾರಳು ಪಾವತಿಸಿದ ಹಣದಜೊತೆಗೆ ಶೇ.10 ರಂತೆ ಬಡ್ಡಿ ಸೇರಿಸಿ ಆದೇಶವಾದ ಒಂದು ತಿಂಗಳೊಳಗಾಗಿ ಪಾವತಿಸುವಂತೆ ಎದುರುದಾರರಿಗೆ ನಿರ್ಧೇಶಿಸಿದೆ. ಅಲ್ಲದೇ ದೂರುದಾರಳಿಗೆ ಆಗಿರುವ ಅನಾನುಕೂಲ ಹಾಗೂ ಮಾನಸೀಕ ಹಿಂಸೆಗೆ ರೂ.50,000 ಪರಿಹಾರ ಹಾಗೂ ಪ್ರಕರಣದ ಖರ್ಚು ವೆಚ್ಚ ರೂ.10,000 ಕೊಡುವಂತೆ ಎದುರುದಾರರಾದ ಸಾಯಿ ಬಿಲ್ಡರ್ಸಗೆ ಆಯೋಗ ತನ್ನ ತೀರ್ಪಿನಲ್ಲಿ ಆದೇಶಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ