Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಶಾಲೆಗೆ ಮದ್ಯದ ಅಮಲು: ಶಿಕ್ಷಕನ ವರ್ತನೆಗೆ ಪೋಷಕರ ಆಕ್ರೋಶ

ಪ್ರಾರ್ಥನೆ ವೇಳೆ ತೂರಾಡಿದ ಶಿಕ್ಷಕ; ವಿದ್ಯಾರ್ಥಿಗಳ ಮುಂದೆ ಅವಮಾನಕರ ಘಟನೆ—ಶಿಕ್ಷಕನ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

 

 


ಮಸ್ಕಿ: ತಾಲೂಕಿನ ಸರ್ಕಾರಿ ಕೊಟೆಕಲ್ ಶಾಲೆಯಲ್ಲಿ ಶಿಕ್ಷಕರೊಬ್ಬರು ಮದ್ಯಪಾನ ಮಾಡಿ ಶಾಲೆಗೆ ಆಗಮಿಸಿ, ವಿದ್ಯಾರ್ಥಿಗಳ ಎದುರೇ ನಿಯಂತ್ರಣ ಕಳೆದುಕೊಂಡು ತೂರಾಡಿದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಶಿಕ್ಷಕರ ಇಂತಹ ವರ್ತನೆಗೆ ವಿದ್ಯಾರ್ಥಿಗಳ ಪಾಲಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಶಿಕ್ಷಣ ಇಲಾಖೆಯು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಶನಿವಾರ ಬೆಳಿಗ್ಗೆ ತರಗತಿಗಳು ಆರಂಭವಾಗುವ ಮುನ್ನ ಶಾಲೆಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಶಿಕ್ಷಕ ಹನುಮಂತಪ್ಪ ಎಂಬವರು ಪಾನಮತ್ತ ಸ್ಥಿತಿಯಲ್ಲಿ ಶಾಲೆಗೆ ಆಗಮಿಸಿದ್ದರು ಎನ್ನಲಾಗಿದೆ. ಜೋಲಿ ಹೊಡೆಯುತ್ತಾ ಸರಿಯಾಗಿ ನಿಲ್ಲಲೂ ಸಾಧ್ಯವಾಗದೆ ತೂರಾಡುತ್ತಿದ್ದುದನ್ನು ಗಮನಿಸಿದ ವಿದ್ಯಾರ್ಥಿಗಳು ಆತಂಕಗೊಂಡು ಇತರೆ ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ.
ಘಟನೆಯ ಸುದ್ದಿ ಪಾಲಕರಿಗೆ ತಿಳಿಯುತ್ತಿದ್ದಂತೆ ಕೆಲವರು ಶಾಲೆಗೆ ಆಗಮಿಸಿ ಶಿಕ್ಷಕನ ವರ್ತನೆಯನ್ನು ತೀವ್ರವಾಗಿ ಖಂಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕಾದವರು. ಆದರೆ, ಶಾಲೆಯಲ್ಲೇ ಪಾನಮತ್ತ ಸ್ಥಿತಿಯಲ್ಲಿ ಕಾಣಿಸಿಕೊಳ್ಳುವುದು ಮಕ್ಕಳ ಶೈಕ್ಷಣಿಕ ವಾತಾವರಣದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಶಿಕ್ಷಕರು ಪ್ರತಿನಿತ್ಯವೂ ಮದ್ಯಪಾನ ಮಾಡಿ ಶಾಲೆಗೆ ಬರುತ್ತಾರೆ ಎಂದು ಕೆಲವು ವಿದ್ಯಾರ್ಥಿಗಳು ಪಾಲಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಆರೋಪ ನಿಜವೇ ಎಂಬುದನ್ನು ಶಿಕ್ಷಣ ಇಲಾಖೆ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಶಾಲೆಯಂತಹ ಪವಿತ್ರ ಶೈಕ್ಷಣಿಕ ಸ್ಥಳದಲ್ಲಿ ಶಿಕ್ಷಕರೊಬ್ಬರು ಕರ್ತವ್ಯದ ವೇಳೆಯಲ್ಲಿ ಪಾನಮತ್ತ ಸ್ಥಿತಿಯಲ್ಲಿ ಕಾಣಿಸಿಕೊಂಡಿರುವ ಆರೋಪವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಬೇಕಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ, ಶಿಸ್ತು ಹಾಗೂ ಶಿಕ್ಷಣದ ಗುಣಮಟ್ಟದ ದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪ ಸತ್ಯವೆಂದು ದೃಢಪಟ್ಟರೆ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ಪಾಲಕರು ಹಾಗೂ ಗ್ರಾಮಸ್ಥರ ಒತ್ತಾಯವಾಗಿದೆ

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೋಮಲಾಪುರ ಕಾಯ್ದಿಟ್ಟ ಅರಣ್ಯ ಜಮೀನು ಖರಾಬು ಆಗಿಲ್ಲ: ಅರಣ್ಯ ಹಾಗೂ ಕಂದಾಯ ಇಲಾಖೆ ಸ್ಪಷ್ಟನೆಶಾಲೆಗೆ ಮದ್ಯದ ಅಮಲು: ಶಿಕ್ಷಕನ ವರ್ತನೆಗೆ ಪೋಷಕರ ಆಕ್ರೋಶಶಾಲೆಗೆ ಮದ್ಯದ ಅಮಲು: ಶಿಕ್ಷಕನ ವರ್ತನೆಗೆ ಪೋಷಕರ ಆಕ್ರೋಶಶಾಲೆಗೆ ಮದ್ಯದ ಅಮಲಿನಲ್ಲಿ ಬಂದ ಶಿಕ್ಷಕ !: ಶಿಕ್ಷಕನ ವರ್ತನೆಗೆ ಪೋಷಕರ ಆಕ್ರೋಶಕುರುಗೋಡಿನಲ್ಲಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆಕ್ಷಯರೋಗ ಮುಕ್ತ ಸಮಾಜಕ್ಕಾಗಿ ಕೈಜೋಡಿಸಿ: ಡಾ. ಇಂದ್ರಾಣಿ ವಿ. ಕರೆಆಸ್ಪತ್ರೆಗಳ ಸುತ್ತಮುತ್ತ ತಂಬಾಕು ಮುಕ್ತ ವಲಯ ಜಾರಿ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ - ತಹಶೀಲ್ದಾರ ವಿಶ್ವಜಿತ್ ಮೆಹೆತಾವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಕೊಪ್ಪಳ ಅಂಚೆ ವಿಭಾಗ: ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ -------------ನೇಪಾಳ ಪ್ರವಾಹ: ಬಳ್ಳಾರಿ ಜಿಲ್ಲೆಯ ಪ್ರವಾಸಿಗರು, ನಾಗರಿಕರ ನೆರವಿಗೆ ಸಹಾಯವಾಣಿ ಆರಂಭ