Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂಪ್ಲಿ: ಆಸ್ತಿ ತೆರಿಗೆಯಲ್ಲಿ ಶೇ.05 ರಷ್ಟು ಏರಿಕೆ


ಬಳ್ಳಾರಿ,ಏ.06

ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ಮತ್ತು ವಾಣಿಜ್ಯ ಉದ್ದೇಶದ ಆಸ್ತಿಗಳ ತೆರಿಗೆಯನ್ನು 2026-27ನೇ ಸಾಲಿಗೆ ಅನ್ವಯವಾಗುವಂತೆ ಹೆಚ್ಚಳ ಮಾಡಲಾಗಿದೆ ಎಂದು

ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ನಗರಾಡಳಿತ ನಿರ್ದೇಶನಾಲಯದ ಸುತ್ತೋಲೆ ಮತ್ತು ಕರ್ನಾಟಕ ಪುರಸಭೆಗಳ ಕಾಯ್ದೆ 1964ರ ತಿದ್ದುಪಡಿ ನಿಯಮಗಳನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಆಸ್ತಿ ತೆರಿಗೆಯನ್ನು ಮಾರುಕಟ್ಟೆ ಮೌಲ್ಯದ ಆಧಾರದ ಮೇಲೆ ಪರಿಷ್ಕರಿಸುವುದು ಕಡ್ಡಾಯವಾಗಿದೆ.

ಕಂಪ್ಲಿ ಪುರಸಭೆ ವ್ಯಾಪ್ತಿಯ ಎಲ್ಲಾ ಆಸ್ತಿ ಮಾಲೀಕರಿಗೆ ಈ ಪರಿಷ್ಕೃತ ದರ ಅನ್ವಯವಾಗಲಿದೆ. ವಸತಿ ಆಸ್ತಿಗಳಿಗೆ ಶೇ.05 ರಷ್ಟು ತೆರಿಗೆ ಹೆಚ್ಚಳ, ವಾಣಿಜ್ಯ ಮತ್ತು ಕೈಗಾರಿಕಾ ಆಸ್ತಿಗಳ ಖಾಲಿ ನಿವೇಶನ ಹಾಗೂ ಕಟ್ಟಡಗಳಿಗೆ ಶೇ.05 ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದ್ದು, ಈ ಹೊಸ ದರಗಳು 2026-27ನೇ ಆರ್ಥಿಕ ಸಾಲಿಗೆ ಅನ್ವಯವಾಗಲಿವೆ.

ಆಸ್ತಿ ಮಾಲೀಕರು ಈ ಬದಲಾವಣೆಯನ್ನು ಗಮನಿಸಿ, ಪರಿಷ್ಕೃತ ದರದಂತೆ ತೆರಿಗೆ ಪಾವತಿಸಿ ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ