Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಮೇ 15 ರಂದು ‘ಪಿಂಚಣಿ ಅದಾಲತ್’ ಮತ್ತು ‘ಜಿಪಿಎಫ್ ಅದಾಲತ್’ ಆಯೋಜನೆ


ಬಳ್ಳಾರಿ,ಮೇ 08

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪಿಂಚಣಿದಾರರ ಮತ್ತು ಜಿಪಿಎಫ್ ಚಂದಾದಾರರ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮೇ 15 ರಂದು ವಿಶೇಷ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮೇ 15 ರಂದು ಜಿಲ್ಲಾಡಳಿತ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಪಿಂಚಣಿ ಅದಾಲತ್ ಹಾಗೂ ಮಧ್ಯಾಹ್ನ 02.30 ಗಂಟೆಗೆ ಜಿಪಿಎಫ್ ಅದಾಲತ್ ಒಳಗೊಂಡು ಎರಡು ಪ್ರತ್ಯೇಕ ಅವಧಿಗಳಲ್ಲಿ ಈ ಅದಾಲತ್ ಆಯೋಜಿಸಲಾಗಿದೆ.

ಕಲಬುರಗಿ ವಿಭಾಗ ವ್ಯಾಪ್ತಿಯ ಬಳ್ಳಾರಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ವ್ಯಾಪ್ತಿಯ ನಿವೃತ್ತಿ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು, ಜಿಪಿಎಫ್ ಚಂದಾದಾರರು ಸಂಬ0ಧಿಸಿದ ಆಯಾ ಜಿಲ್ಲಾಡಳಿತ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನ ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣೆ ಖಜಾನೆಯ ಅಪರ ನಿರ್ದೇಶಕರು ಹಾಗೂ ಮಹಾಲೇಖಪಾಲರ ಕಚೇರಿಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಈ ಅದಾಲತ್ ನಡೆಯಲಿದೆ.

ಪಿಂಚಣಿ ಪಾವತಿಗೆ ಸಂಬoಧಿಸಿದoತೆ ವಿಳಂಬ ಅಥವಾ ಇತರೆ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರು ಅದಾಲತ್ ನ ಈ ಸುವರ್ಣಾವಕಾಶ ಬಳಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ