Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರೊಬ್ಬರಿಗೆ ಸರ್ವೇ ಮಾಡಿಕೊಡಲು 50 ಸಾವಿರ ಡಿಮ್ಯಾಂಡ್

 

ಅರುಣೋದಯ ಕ್ಯಾಂಪ್ ನಲ್ಲಿ ರೈತನಿಂದ ಲಂಚ ಪಡೆಯುತ್ತಿದ್ದ ವೇಳೆ ಸೋಮವಾರ ರಾತ್ರಿ ಸರ್ವೇಯರ್ ನನ್ನು ರೆಡ್ ಹ್ಯಾಂಡ್ ಆಗಿ ವಶಪಡಿಸಿಕೊಂಡ ಲೋಕಾಯುಕ್ತ ಪೊಲೀಸರು.

ಕಾರಟಗಿ: ತಾಲೂಕಿನ ರೈತರೊಬ್ಬರಿಗೆ ಸರ್ವೇ ಮಾಡಿಕೊಡಲು 50 ಸಾವಿರ ಡಿಮ್ಯಾಂಡ್ ಮಾಡಿದ್ದ ಲೈಸೆನ್ಸ್ ಸರ್ವೇಯರ್ ನನ್ನು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ವಶಪಡಿಸಿಕೊಂಡ ಘಟನೆ ತಾಲೂಕಿನ ಅರುಣೋದಯ ತಾಂಡಾದಲ್ಲಿ ಸೋಮವಾರ ರಾತ್ರಿ ನಡೆದಿದೆ.


ವಿಜಯ್ ಚೌಹಾಣ್ ಎನ್ನುವ ಲೈಸೆನ್ಸ್ ಸರ್ವೇಯರ್ ರೈತರೊಬ್ಬರ 6 ಎಕರೆ ಜಮೀನು ಪೋಡಿ ಮಾಡಿಕೊಡಲು ವಿನಾ ಕಾರಣ ವಿಳಂಬ ಮಾಡಿದ್ದಾರೆ. ಜತೆಗೆ ರೈತನ ಕೆಲಸ ಮಾಡಿಕೊಡಲು ಸತಾಯಿಸಿದ್ದಾರೆ ಎನ್ನಲಾಗಿದೆ. ಇದರಿಂದ ರೋಷಿ ಹೋಗಿರುವ ರೈತ ಪರಿಪರಿಯಾಗಿ ಬೇಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಆಗ ಸರ್ವೇಯರ್ ರೈತನಿಗೆ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಆಗ ರೈತ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾನೆ. ಈ ವೇಳೆ ಲಂಚ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಲೋಕಾಯುಕ್ತ ಎಸ್ ಪಿ ಸತೀಶ್ ಚಿಟುಗುಬ್ಬಿ ಹಾಗೂ ಡಿವೈ ಎಸ್ ಪಿ ವಸಂತ್ ಕುಮಾರ್ ನೇತೃತ್ವದಲ್ಲಿ ಪಿಐಗಳಾದ ಚಂದ್ರಪ್ಪ ಇ ಟಿ, ಸುನಿಲ್ ಮೆಗಾಲ್ ಮನೆ, ನಾಗರತ್ನ ಹಾಗೂ ಕಾನ್ಸ್ಟೇಬಲ್ ಗಳಾದ ಬಸವರಾಜ, ಚನ್ನವಿರ, ವೀರನಗೌಡ, ಮಂಜುನಾಥ, ಗಣೇಶ್ ಗೌಡ ಒಳಗೊಂಡ ತಂಡ ಸೋಮವಾರ ರಾತ್ರಿ ಅರುಣೋದಯ ಕ್ಯಾಂಪ್ ನ ವಿಜಯ್ ಚೌಹಾಣ್ ನಿವಾಸದಲ್ಲಿ ರೈತನಿಂದ 30 ಸಾವಿರ ರೂ. ಲಂಚ ಸ್ವೀಕರಿಸವ ವೇಳೆ ದಾಳಿ ನಡೆಸಿ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ವಶಪಡಿಸಿಕೊಂಡಿದ್ದಾರೆ. ಬಳಿಕ ಎಲ್ಲಾ ಪ್ರಕ್ರಿಯೆ ಗಳನ್ನು ಮುಗಿಸಿದ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ