Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮವಾಗಿ ಮದ್ಯಸಾರ ಮತ್ತು ಸಾಗಾಣಿಕೆ ವಾಹನ ಸೇರಿ 79 ಲಕ್ಷ ಮೌಲ್ಯದ ವಸ್ತು ಜಪ್ತಿ

 

ಧಾರವಾಡ  ಫೆಬ್ರವರಿ 20: ಬೆಳಗಾವಿ ಕೇಂದ್ರಸ್ಥಾನ ಅಪರ ಅಬಕಾರಿ ಆಯುಕ್ತರು (ಜಾರಿ ಮತ್ತು ಅಪರಾಧ) ಡಾ. ವೈ ಮಂಜುನಾಥ ಅವರ ಮಾರ್ಗದರ್ಶನದಲ್ಲಿ ಇಂದು (ಫೆ.20) ರಂದು ಬೆಳಗ್ಗೆ 5 ಗಂಟೆ ಸಮಯದಲ್ಲಿ ಕಲಘಟಗಿ ಶಹರದ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿರುವಾಗ ಬಂದ ಮಾಹಿತಿಯಲ್ಲಿ, ಕಲಘಟಗಿ ಪಟ್ಟಣದ ಕಡೆಗೆ ಟಾಟಾ ಕಂಪನಿಯ ಟ್ಯಾಂಕರ ವಾಹನ ನೊಂದಣಿ ಸಂಖ್ಯೆ: ಜಿಜೆ 39 ಟಿ 2941 ನೇದ್ದರಲ್ಲಿ ಅಕ್ರಮವಾಗಿ ಮದ್ಯಸಾರವನ್ನು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಕಲಘಟಗಿ ಶಹರದ ನ್ಯೂ ಶೆಟ್ಟಿ ಲಂಚ್ ಹೋಮ್ ಮುಂಭಾಗದಲ್ಲಿ ವಾಹನವನ್ನು ತಡೆದು ತಪಾಸಣೆ ನಡೆಸಲಾಗಿ ಟ್ಯಾಂಕರನಲ್ಲಿ ಒಟ್ಟು 40 ಸಾವಿರ ಲೀಟರ ಮದ್ಯಸಾರ ಇದ್ದು, ಸದರಿ ಮದ್ಯಸಾರವನ್ನು ಗೋವಾ ರಾಜ್ಯಕ್ಕೆ ಸಾಗಾಣಿಕೆ ಮಾಡುವ ಬಗ್ಗೆ ವಾಹನ ಚಾಲಕನಿಂದ ತಿಳಿದು ಬಂದಿರುತ್ತದೆ.

ಸದರಿ ಮದ್ಯಸಾರದ ಮೌಲ್ಯ ರೂ. 24 ಲಕ್ಷ ಹಾಗೂ ವಾಹನದ ಮೌಲ್ಯ ರೂ. 55 ಲಕ್ಷ ಹೀಗೆ ಒಟ್ಟು ಮೌಲ್ಯ ರೂ. 79 ಲಕ್ಷ ಆಗುತ್ತಿದ್ದು, ವಾಹನ ಚಾಲಕನಾದ ಓಂ ಪ್ರಕಾಶ ವಿರಾದ ರಾಮ್, ಬಾರಮರ ಜಿಲ್ಲೆ, ರಾಜಸ್ಥಾನ ರಾಜ್ಯ ಆಗಿದ್ದು, ಸದರಿ ವಾಹನ ಮಾಲಿಕನ ಹೆಸರು ಸುಖದೇವ ಬಯ್ಯಾರಾಮ, ಇಂದಿರಾ ನಗರ, ಕಜ್ ಗುಜರಾತ ರಾಜ್ಯ ಎಂಬುದು ತಿಳಿದು ಬಂದಿರುತ್ತದೆ.

ಈ ಕುರಿತು ಅಬಕಾರಿ ಉಪ ಅಧೀಕ್ಷಕರು, ಧಾರವಾಡ ಉಪ ವಿಭಾಗ ಇವರು ಮೊಕದ್ದಮೆ ಸಂಖ್ಯೆ :14/2024-25 ನ್ನು ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿರುತ್ತಾರೆ. ಸದರಿ ಮದ್ಯಸಾರ ಸಾಗಾಣಿಕೆಯಲ್ಲಿ ದೊಡ್ಡ ಜಾಲವಿದ್ದು ತನಿಖೆಯಿಂದ ಪತ್ತೆ ಹಚ್ಚಬೇಕಾಗಿರುತ್ತದೆ.

ಈ ದಾಳಿಯಲ್ಲಿ ಧಾರವಾಡ ಅಬಕಾರಿ ಉಪ ಆಯುಕ್ತರ ಕಚೇರಿಯ ಅಬಕಾರಿ ಅಧೀಕ್ಷಕ ಆತ್ಮಲಿಂಗಯ್ಯ ಮಠಪತಿ, ಧಾರವಾಡ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ (ಪ್ರಭಾರ) ಲಿಂಗರಾಜ ಕೆ. ಹಾಗೂ ಕಲಘಟಗಿ ವಲಯದ ಅಬಕಾರಿ ನಿರೀಕ್ಷಕ ಶಿವಪ್ಪ ಸಣ್ಣಮನಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಈ ದಾಳಿಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ಬೆಳಗಾವಿ ಕೇಂದ್ರಸ್ಥಾನದ ಅಪರ ಅಬಕಾರಿ ಆಯುಕ್ತರು (ಜಾರಿ ಮತ್ತು ಅಪರಾಧ) ಡಾ. ವೈ ಮಂಜುನಾಥ, ಅವರು ಅಭಿನಂದಿಸಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ