Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಥಿಕ ಸಬಲೀಕರಣಕ್ಕೆ ಜೇನು ಸಾಕಾಣಿಕೆ ಸಹಕಾರಿ : ಶೈಲಾ ಎನ್

ಶಿವಮೊಗ್ಗ, ಫೆ.18 ಆರ್ಥಿಕ ಸಬಲೀಕರಣಕ್ಕೆ ಜೇನು ಸಾಕಾಣಿಕೆ ಒಂದು ಉತ್ತಮ ಮಾರ್ಗವಾಗಿದ್ದು, ಜೇನು ಸಾಕಾಣಿಕೆ ತರಬೇತಿಯ ಸದುಪಯೋಗ ಪಡೆಯಬೇಕೆಂದು ತೀರ್ಥಹಳ್ಳಿ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಶೈಲಾ ಎನ್ ತಿಳಿಸಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ತಾ.ಪಂ ತೀರ್ಥಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಐಸಿಎಆರ್, ಟಿಎಸ್‌ಪಿ ಯೋಜನೆ ‘ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಜೇನು ಸಾಕಾಣಿಕೆಯ ತಂತ್ರಗಳೊ0ದಿಗೆ ಪರಿಶಿಷ್ಟ ಪಂಗಡಗಳ ಸಬಲೀಕರಣ’ ಎಂಬ ವಿಷಯದಡಿ ಫೆ.14 ರಿಂದ 16 ರವರೆಗೆ ತೀರ್ಥಹಳ್ಳಿ ಗ್ರಾಮೀಣಾಭಿವೃದ್ದಿ ಭವನದಲ್ಲಿ ಏರ್ಪಡಿಸಲಾಗಿದ್ದ ಜೇನು ಸಾಕಾಣಿಕೆ ತರಬೇತಿಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೇನು ಸಾಕಾಣಿಕೆ ಒಂದು ಉತ್ತಮ ತರಬೇತಿಯಾಗಿದೆ. ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಸಾಕಾಣಿಕೆ ಕೈಗೊಂಡು ನಂತರ ಹಲವಾರು ಪೆಟ್ಟಿಗೆಗಳನ್ನು ಇಟ್ಟು ದೊಡ್ಡ ಪ್ರಮಾಣದಲ್ಲಿ ಮಾಡಿ ಕುಟುಂಬದ, ಸಮಾಜದ ಹಾಗೂ ದೇಶದ ಅಭಿವೃದ್ದಿಗೆ ಕಾರಣರಾಗುವಂತೆ ಕರೆ ನೀಡಿದರು.

ಆರ್ಥಿಕ ಸಬಲೀಕರಣಕ್ಕೆ ಈ ತರಬೇತಿಯು ಸಹಕಾರಿಯಾಗಿದ್ದು ಆಸಕ್ತರೆಲ್ಲ ಈ ತರಬೇತಿಯ ಪ್ರಯೋಜನ ಪಡೆದುಕೊಂಡು ತಮ್ಮ ಜೀವನ ಸುಧಾರಿಸಿಕೊಳ್ಳುವಂತೆ ಸಲಹೆ ನೀಡಿದರು.

ಇದೇ ವೇಳೆ ಶಿಬಿರಾರ್ಥಿಗಳಿಗೆ ತರಬೇತಿ ಪ್ರಮಾಣ ಪತ್ರದೊಂದಿಗೆ ಜೇನು ಸಾಕಾಣಿಕೆಗೆ ಅಗತ್ಯವಾದ ಪರಿಕರಗಳನ್ನು ವಿತರಣೆ ಮಾಡಲಾಯಿತು.

ನೋಡಲ್ ಅಧಿಕಾರಿ ಹಾಗೂ ಪ್ರಧಾನ ಪರಿಶೋಧಕರಾದ ಡಾ.ಜಯಲಕ್ಷಿö್ಮ ನಾರಾಯಣ ಹೆಗಡೆ ಕಾರ್ಯಕ್ರಮ ನಿರ್ವಹಿಸಿ, ಮೂರು ದಿನಗಳ ಕಾಲ ನಡೆದ ತರಬೇತಿಯ ಕುರಿತು ವಿವರಣೆ ನೀಡಿದರು. ವಿಘ್ನೇಶ ತಲಕಾಲಕೊಪ್ಪ, ಪ್ರತೀಕ್ ಇತರರು ಹಾಜರಿದ್ದರು. ತೀರ್ಥಹಳ್ಳಿ ತಾಲ್ಲೂಕಿನ ಸುತ್ತಮುತ್ತಲಿನ ಪರಿಶಿಷ್ಟ ಪಂಗಡಗಳ 30 ರೈತ ಮಹಿಳೆಯರು, ರೈತರು, ಯುವಕ ಯುವತಿಯರು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ