Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಮಂಟಪಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಗೋಡೆಬರಹ ಕಡ್ಡಾಯ



ಕೊಪ್ಪಳ ಅಕ್ಟೋಬರ್ 14 ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬಾಲ್ಯವಿವಾಹ ನಿಷೇಧ ಕಾನೂನು, ಅಪರಾಧಕ್ಕಿರುವ ಶಿಕ್ಷೆ ಪ್ರಮಾಣ ಮುಂತಾದವುಗಳ ಕುರಿತು ವಿವಾಹಗಳು ನಡೆಯುವ ದೇವಸ್ಥಾನ, ಶಾದಿಮಹಲ್, ಕಲ್ಯಾಣ ಮಂಟಪ ಹಾಗೂ ಫಂಕ್ಷನ್ ಹಾಲ್‌ಗಳಲ್ಲಿ ಶಾಶ್ವತ ಫಲಕ ಹಾಗೂ ಗೋಡೆಬರಹವನ್ನು ಕಡ್ಡಾಯವಾಗಿ ಬರೆಯಿಸಿ, ಪ್ರದರ್ಶಿಸಬೇಕು.

ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ ಕಾಯ್ದೆ-2016 ರನ್ವಯ 18 ವರ್ಷದೊಳಗಿನ ಹೆಣ್ಣು ಮಕ್ಕಳ ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ವಿವಾಹವು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆಯ ಕಲಂ 9 ರನ್ವಯ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವನ್ನು ವಿವಾಹ ಮಾಡಿಕೊಂಡ ಪುರುಷ, ಕಲಂ 10 ಮತ್ತು 11 ರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹವನ್ನು ಆಯೋಜಿಸಿದವರು, ಆಯೋಜಿಸಲು ಉತ್ತೇಜನ ಅಥವಾ ಪ್ರೋತ್ಸಾಹ ನೀಡುವವರು ಮತ್ತು ಬಾಲ್ಯವಿವಾಹದಲ್ಲಿ ಭಾಗವಹಿಸುವವರಿಗೆ 1 ವರ್ಷದಿಂದ 2 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷಗಳ ದಂಡ ವಿಧಿಸಬಹುದಾಗಿರುತ್ತದೆ.

ಮಾನ್ಯ ಸರ್ವೋಚ್ಛ ನ್ಯಾಯಾಲಯವು ಬಾಲ್ಯವಿವಾಹಗಳನ್ನು ತಡೆಗಟ್ಟುವುದು ಅತ್ಯಗತ್ಯವಾಗಿದ್ದು, ಕಾಯ್ದೆಯ ಕುರಿತು ಸಮುದಾಯಗಳಲ್ಲಿ ಮತ್ತಷ್ಟು ಜಾಗೃತಿಯನ್ನು ಮೂಡಿಸುವಂತೆ ನಿರ್ದೇಶಿಸಿದೆ. ಆದ್ದರಿಂದ ವಿವಾಹ ಆಯೋಜಕರು, ದೇವಸ್ಥಾನ, ಶಾದಿ ಮಹಲ್‌ಗಳ, ಉಸ್ತುವಾರಿ ಸದಸ್ಯರು, ಕಲ್ಯಾಣ ಮಂಟಪ ಮತ್ತು ಫಂಕ್ಷನ್ ಹಾಲ್‌ಗಳ ವ್ಯವಸ್ಥಾಪಕರುಗಳಿಗೆ ಅವರುಗಳ ವ್ಯಾಪ್ತಿಯಲ್ಲಿ ಆಯೋಜಿಸುವ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹಗಳಲ್ಲಿ ಅಥವಾ ಅಧೀನದಲ್ಲಿರುವ ಸ್ಥಳದಲ್ಲಿ ಬಾಲ್ಯವಿವಾಹ ಜರುಗದಂತೆ ಸೂಕ್ತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಬಾಲ್ಯವಿವಾಹ ನಡೆದಲ್ಲಿ, ಅಂತವರನ್ನು ಹಾಗೂ ಸರಕು ಮತ್ತು ಸೇವೆಗಳನ್ನು ಒದಗಿಸಿದವರನ್ನೂ ಸಹ ಆರೋಪಿಗಳನ್ನಾಗಿಸಿ ಪ್ರಕರಣ ದಾಖಲಿಸಲಾಗುವುದಾಗಿ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ