Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ*

ಶಿವಮೊಗ್ಗ 

ರೈತರು ತಮ್ಮ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.

ರೈತರು ಸರ್ಕಾರದ ಯಾವುದೇ ಸೌಲಭ್ಯದ ಫಲಾನುಭವಿಯಾಗಲು ರೈತರು ತಮ್ಮ ಆರ್ಟಿಸಿ ಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು. ಈ ಕುರಿತು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು ಇದನ್ನು ರೈತರು ತಮ್ಮ ಮೊಬೈಲ್ ಮೂಲಕ ಅಥವಾ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಸದರಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿರುತ್ತದೆ.

ಆರ್ಟಿಸಿ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು ಉದಾಸೀನ ಮಾಡಿದರೆ ಮುಂದಿನ ದಿನಗಳಲ್ಲಿ ಅಂತಹ ರೈತರಿಗೆ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಕ್ಕೆ ತೊಂದರೆ ಉಂಟಾಗಲಿದೆ.

ಆರ್ಟಿಸಿ ಗೆ ಆಧಾರ್ ಜೋಡಣೆ ಮಾಡುವುದರಿಂದ ಜಮೀನಿನ ದಾಖಲೆ ಮತ್ತಷ್ಟು ಸುರಕ್ಷಿತವಾಗಿರುತ್ತದೆ. ಭೂ ದಾಖಲೆ ಪಡೆಯುವುದು ಸುಲಭ. ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಕೆ ಸರಳವಾಗುತ್ತದೆ. ಖಾತಾ ವಿವಾದವನ್ನು ತಪ್ಪಿಸಲು ಅನುಕೂಲ, ಸಾಲ ಪ್ರಕ್ತಿಯೆ ಸುಲಭ ಹಾಗೂ ಜಮೀನು ಮಾರಾಟ ಸಮಯದಲ್ಲಿ ಹೆಚ್ಚಿನ ಪಾರದರ್ಶಕತೆ ಇರುತ್ತದೆ ಆದ್ದರಿಂದ ತಮ್ಮ ಆರ್ಟಿಸಿ ಗೆ ಆಧಾರ್ ಜೋಡಣೆ ಮಾಡಬೇಕೆಂದು ಸಾರ್ವಜನಿಕರಲ್ಲಿ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ಬಿ.ಎನ್.ಗಿರೀಶ್ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ