Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳೆ ವಿಮೆ ಆದ್ಯತೆಯಾಗಿ ಪರಿಗಣಿಸಿ: ಎಡಿಸಿ ಮೊಹಮ್ಮದ್ ಝುಬೇರ್


ಬಳ್ಳಾರಿ,ಜು.08



ಬೆಳೆ ವಿಮೆಗೆ ಹೆಚ್ಚು ರೈತರು ನೋಂದಾಯಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಅರಿವು ಮೂಡಿಸುವ ಹಾಗೂ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆ ಆಗುತ್ತಿದ್ದು ಈಗಾಗಲೇ ಕೃಷಿ ಚಟುವಟಿಕೆಗಳು ಬರದಿಂದ ಸಾಗುತ್ತಿವೆ. ಎಲ್ಲಾ ಅಧಿಕಾರಿಗಳು ಜಿಲ್ಲೆಯಲ್ಲಿ ಬೆಳೆ ವಿಮೆ ಕುರಿತು ವ್ಯಾಪಕ ಪ್ರಚಾರ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ಯೋಜನೆಯಡಿ ರೈತರನ್ನು ನೋಂದಾಯಿಸಿಕೊಳ್ಳುವಂತೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಸೂಚಿಸಿದರು.

ಬೆಳೆ ವಿಮೆ ವಿಷಯವನ್ನು ಆದ್ಯತೆಯ ವಿಷಯವನ್ನಾಗಿ ಪರಿಗಣಿಸಬೇಕು. ವಿಸ್ತøತವಾಗಿ ವ್ಯಾಪಕ ಪ್ರಚಾರ ನೀಡಬೇಕು ಎಂದು ತಿಳಿಸಿದರು.

ರೈತರು ಬೆಳೆ ನೋಂದಾಯಿಸಿಕೊಳ್ಳಲು ಬ್ಯಾಂಕ್, ಗ್ರಾಮ ಒನ್ ಹಾಗೂ ಸಿಎಸ್ಸಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದ್ದು, ರೈತರಿಗೆ ಅಗತ್ಯ ಮಾಹಿತಿ ಒದಗಿಸಬೇಕು ಎಂದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಉಪ ಕೃಷಿ ನಿರ್ದೇಶಕ ಕೆಂಗೇಗೌಡ, ಸಹಾಯಕ ಕೃಷಿ ನಿರ್ದೇಶಕ ದಯಾನಂದ ಸೇರಿದಂತೆ ಜಿಲ್ಲಾ ಬ್ಯಾಂಕ್ ವ್ಯವಸ್ಥಾಪಕರು, ಸಹಕಾರ ಸಂಘದ ಪ್ರತಿನಿಧಿಗಳು ಹಾಗೂ ಜಿಲ್ಲೆಯ ಗ್ರಾಮ ಒನ್ ಮತ್ತು ಸಿಎಸ್ಸಿ ಕೇಂದ್ರಗಳ ಅಪರೇಟರ್ಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ