Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜು.24 ರಂದು ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಮತ್ತು ಜಿಲ್ಲಾ ಮಟ್ಟದ ಜಾಥಾ

ಬಳ್ಳಾರಿ,ಜು.22
ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ ಬಳ್ಳಾರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಇವರ ಸಂಯುಕ್ತಾಶ್ರಯದಲ್ಲಿ ಜುಲೈ 24 ರಂದು ಬೆಳಿಗ್ಗೆ 11 ಗಂಟೆಗೆ ನಗರದ ರಾಘವ ಕಲಾಮಂದಿರದಲ್ಲಿ ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ಸೈಬರ್ ಕ್ರೆöÊಂ, ಮಾದಕ ದ್ರವ್ಯ ಮುಕ್ತ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಜಿಲ್ಲಾ ಮಟ್ಟದ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಎಸ್‌ಪಿ ಕಚೇರಿಯಿಂದ ಜಾಥಾ ನಡೆಯಲಿದ್ದು, ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿದ್ಧಲಿಂಗ ಪ್ರಭು ಚಾಲನೆ ನೀಡುವರು. ಬಳಿಕ ಬೆಳಿಗ್ಗೆ 11 ಗಂಟೆಗೆ ನಗರದ ರಾಘವ ಕಲಾಮಂದಿರದಲ್ಲಿ ಸಮಾವೇಶ ಕಾರ್ಯಕ್ರಮ ಉದ್ಘಾಟಿಸುವರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಭಾಗಿಯಾಗುವರು.
ರೀಡ್ಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ ಅವರು ಅಧ್ಯಕ್ಷತೆ ವಹಿಸುವರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹಾಗೂ ನೋಡಲ್ ಅಧಿಕಾರಿ ನವೀನ್ ಕುಮಾರ್ ಎನ್., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಬಳ್ಳಾರಿ ನಗರ ಡಿವೈಎಸ್‌ಪಿ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಗೋವಿಂದರಾಜುಲು ವಿ., ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಿಂಧೆ ನಂದಿನಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹನುಮಂತರಾವ್ ಎಂ.ವಿ., ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಶಿವಲೀಲಾ ಸೇರಿದಂತೆ ಮಕ್ಕಳು, ಯುವಕ-ಯುವತಿಯರು ಮತ್ತು ಸ್ವ-ಸಹಾಯ ಸಂಘದ ಮಹಿಳೆಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಆಗುವ ಬೆಳೆನಷ್ಟಕ್ಕೆ ಪರಿಹಾರ* *ಪಿಎಂ ಫಸಲ್ ಬಿಮಾ ಯೋಜನೆ ಜಾರಿ:* *ಅರ್ಹ ರೈತರ ನೋಂದಣಿಗೆ ಕ್ರಮ ಕೈಗೊಳ್ಳಲು ಕೃಷಿ ಜಂಟಿ ನಿರ್ದೇಶಕರಿಗೆ ಸೂಚನೆ: ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್ಬಳ್ಳಾರಿ; ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನಾಚರಣೆ ಕಾರ್ಯಕ್ರಮ ಶಾರೀರಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ: ಡಿಹೆಚ್‌ಒ ಡಾ. ಅಲಕನಂದಾ ಡಿ. ಮಳಗಿಜಾಗತಿಕ ‘ಎಲ್ ನಿನೋ' ಹವಾಮಾನ ವೈಪರೀತ್ಯ ಹಾಗೂ ಬರದ ಭೀತಿ: ಎದುರಿಸಲು ಕರ್ನಾಟಕ ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ ಅ0ತರ್ಜಲ ಸಂರಕ್ಷಣೆ, ಬೋರ್‌ವೆಲ್ ರೀಚಾರ್ಜ್ ಮತ್ತು ಬರನಿರೋಧಕ ಬೆಳೆಗಳ ತಳಿಗೆ ಆದ್ಯತೆವದ್ದಟ್ಟಿ ಗ್ರಾಮದಲ್ಲಿ ಜಿಪಂ ಸಿಇಒ ಭೇಟಿ: ನರೇಗಾ ಕಾಮಗಾರಿಗಳ ಪರಿಶೀಲನೆ ಹಾಗೂ ಕೂಲಿಕಾರರೊಂದಿಗೆ ಸಂವಾದಜು.24 ರಂದು ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಮತ್ತು ಜಿಲ್ಲಾ ಮಟ್ಟದ ಜಾಥಾಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಪ್ರೋಸೆಸ್ ಜಾರಿಕಾರ/ಜವಾನ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನಸ್ವಯಂಸೇವಾ ಸಂಸ್ಥೆಗಳಿಗೆ ಕಡ್ಡಾಯ ನೋಂದಣಿ ಹಾಗೂ ನವೀಕರಣಕ್ಕೆ ಸೂಚನೆಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಪ್ರಭುಲಿಂಗ ಕವಳಿಕಟ್ಟಿಬಳ್ಳಾರಿ: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಶೇ.69.17 ರಷ್ಟು ಡಿಜಿಟಲೀಕರಣ ಪೂರ್ಣ