Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

ಬಳ್ಳಾರಿ,ಜೂ.20
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಿ, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರು ವಿಶೇಷ ಹೆಜ್ಜೆ ಇಟ್ಟಿದ್ದಾರೆ.
ಹಾಗಾಗಿ ಅವರು ತಮ್ಮ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಕ್ಷೇತ್ರದ ಬಂಡಿಹಟ್ಟಿ ಮತ್ತು ಎತ್ತಿನ ಬೂದಿಹಾಳ್ ಗ್ರಾಮದ ಸರ್ಕಾರಿ ಶಾಲೆಗಳ ಸಂಪೂರ್ಣ ಅಭಿವೃದ್ಧಿಗಾಗಿ ತಲಾ 10 ಲಕ್ಷ ರೂಪಾಯಿಗಳ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದು, ಶುಕ್ರವಾರ ಈ ಶಾಲೆಗಳನ್ನು ದತ್ತು ಪಡೆದುಕೊಂಡರು.
ಆಯ್ಕೆಯಾದ ಎರಡು ಶಾಲೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ರೂ. ಗಳಂತೆ ಒಟ್ಟು 20 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯ ಕೊರತೆಯನ್ನು ನೀಗಿಸುವುದು, ಡಿಜಿಟಲ್ ಕಲಿಕೆಗೆ ಉತ್ತೇಜನ ಮತ್ತು ಆಕರ್ಷಕ ಶಾಲಾ ವಾತಾವರಣ ನಿರ್ಮಾಣ ಮಾಡುವುದಾಗಿದೆ.
ಈ ಅನುದಾನದಡಿ ಶಾಲಾ ಕಟ್ಟಡಗಳ ದುರಸ್ತಿ, ಸುಣ್ಣ-ಬಣ್ಣ, ಆಧುನಿಕ ಶೌಚಾಲಯಗಳ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್ ರೂಮ್ ಹಾಗೂ ಪೀಠೋಪಕರಣಗಳ ವ್ಯವಸ್ಥೆಯನ್ನು ಮಾಡಲಾಗುತ್ತದೆ.
*ಶ್ಲಾಘನೆ:*
ಶಾಸಕರ ಈ ಜನಪರ ನಿರ್ಧಾರಕ್ಕೆ ಕ್ಷೇತ್ರದ ಸಾರ್ವಜನಿಕರು ಮತ್ತು ಪೋಷಕರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಖಾಸಗಿ ಶಾಲೆಗಳ ವ್ಯಾಮೋಹದ ನಡುವೆ, ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಈ ಮಟ್ಟದ ಅನುದಾನ ನೀಡಿರುವುದು ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಲಿದೆ ಎಂದು ಸ್ಥಳೀಯ ಮುಖಂಡರು ಹರ್ಷ ವ್ಯಕ್ತಪಡಿಸಿದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ: ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಆಫ್‌ಲೈನ್ ಅರ್ಜಿ ಆಹ್ವಾನಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಕರೆಟಿಬಿ ಡ್ಯಾಮಗೆ ಹೊಸ ಗೇಟಗಳ ಅಳವಡಿಕೆ ಕಾಮಗಾರಿ ಪೂರ್ಣ -- ಸಿಎಂ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಸಚಿವರಾದ ರಾಮಲಿಂಗಾರೆಡ್ಡಿ'ಕರ್ತವ್ಯ' ಆಪ್ ನೋಂದಣಿ - ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ ಶೇಕಡ 70.6 ರಷ್ಟು ಪ್ರಗತಿ ಸಾಧನೆತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ - ಸಾರ್ವಜನಿಕರಿಗೆ ಎಚ್ಚರಿಕೆ"ನಿಯತಕಾಲಿಕೆಗಳು ಜೂನ್ 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ ರೂ.10,000/- ದಂಡ ಎಲ್ಲಾ ಪ್ರಕಾಶಕರು ದಂಡದಿಂದ ಪಾರಾಗಲು ತಕ್ಷಣವೇ ಪ್ರೆಸ್ ಸೇವಾ ಪೋರ್ಟಲ್ ಮೂಲಕ ತಪ್ಪದೆ ವರದಿ ಸಲ್ಲಿಸಿಬೆಲ್ಲಿ ಫ್ಯಾಟ್ ಎಂಬ ಬೊಜ್ಜು ಹಾಗೂ ಅದರ ಮೂಲಕೊಪ್ಪಳ ಜಿಲ್ಲೆಯ ಇತಿಹಾಸದಲ್ಲೇ ಒಂದು ಸುವರ್ಣ ದಾಖಲೆಯಾದ ರಾಜ್ಯ ಮಟ್ಟದ ಚದುರಂಗ ಪಂದ್ಯಾವಳಿ