Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ಸೂಕ್ತ ತಳಿ, ಪೋಷಕಾಂಶಗಳ ನಿರ್ವಹಣೆಯಿಂದ ಹೆಚ್ಚಿನ ಇಳುವರಿ, ಗುಣಮಟ್ಟ ಈರುಳ್ಳಿ ಉತ್ಪಾದನೆ



ಚಿತ್ರದುರ್ಗಜುಲೈ04:

ಹೆಚ್ಚಿನ ಇಳುವರಿ ಹಾಗೂ ಗುಣಮಟ್ಟದ ಈರುಳ್ಳಿ ಉತ್ಪಾದನೆ ಪಡೆಯಲು ರೈತರು ಸೂಕ್ತ ತಳಿಯ ಆಯ್ಕೆ, ಮಣ್ಣು ಮಾದರಿ ಆಧಾರಿತ ಪೋಷಕಾಂಶಗಳ ನಿರ್ವಹಣೆ ಹಾಗೂ ಹೆಚ್ಚಿನ ಸಾವಯವ ಗೊಬ್ಬರ ಬಳಸುವುದು ಸೂಕ್ತ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ಹೇಳಿದರು.

ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಗುರುವಾರ ಜಿಲ್ಲೆಯ ರೈತರಿಗೆ “ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಈರುಳ್ಳಿ ಬೆಳೆಯು ಮುಂಗಾರು ಹಂಗಾಮಿನಲ್ಲಿ ಬೆಳೆಯುವ ಪ್ರಮುಖ ತರಕಾರಿ ಬೆಳೆಯಾಗಿದ್ದು, ಮುಖ್ಯವಾಗಿ ಚಿತ್ರದುರ್ಗ, ಹಿರಿಯೂರು ಮತ್ತು ಚಳ್ಳಕೆರೆ ತಾಲ್ಲೂಕಿನಲ್ಲಿ ಹೆಚ್ಚಾಗಿ ಬೆಳೆಯುತ್ತಿದ್ದು ಸದರಿ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಅನುಸರಿಸಬೇಕಾದ ಬೇಸಾಯ ಕ್ರಮಗಳು ಹಾಗೂ ಕೀಟ ಮತ್ತು ರೋಗ ನಿರ್ವಹಣೆ ಕುರಿತ ತಾಂತ್ರಿಕ ಮಾಹಿತಿಯ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.

ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದ ತರಕಾರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪ್ರಕಾಶ್ ಕೆರೂರೆ ಮಾತನಾಡಿ, ಈರುಳ್ಳಿ ಬೆಳೆಗೆ ಜೂನ್ ಮತ್ತು ಜುಲೈ ತಿಂಗಳು ಬಿತ್ತನೆಗೆ ಸೂಕ್ತವಾಗಿದ್ದು, ಈರುಳ್ಳಿ ಬೆಳೆಯ ವಿವಿಧ ತಳಿಗಳು, ರಸಗೊಬ್ಬರದ ಪ್ರಮಾಣ, ಬಿತ್ತನೆ ಬೀಜ ಬಳಸುವ ಪ್ರಮಾಣ, ಬೀಜೋಪಚಾರದ ಪ್ರಾಮುಖ್ಯತೆ, ಬೆಳೆಯಲ್ಲಿ ಸಸಿ ಮಡಿ ಮಾಡುವ ವಿಧಾನ, ಕಳೆ ನಿರ್ವಹಣೆ ಮತ್ತು ನೀರು ನಿರ್ವಹಣೆ ಕುರಿತು ಮಹಿತಿ ನೀಡಿದರು.

ತದನಂತರ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ತಾಕಿಗೆ ಭೇಟಿ ನೀಡಿ ಈರುಳ್ಳಿ ಬೆಳೆಯ ವಿವಿಧ ತಳಿಗಳ ಪ್ರಯೋಗದ ಪ್ರಾತ್ಯಕ್ಷಿಕೆ ತಾಕಿಗೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಶರಣಪ್ಪ ಜಂಗಂಡಿಯವರು ಹೊಸದಾಗಿ ತಯಾರಿಸಿದ ಈರುಳ್ಳಿಯ ಮೇಲಿನ ಜುಟ್ಟು ಕತ್ತರಿಸುವ ಯಂತ್ರದ ಕುರಿತು ಮಾಹಿತಿ ನೀಡಿದರು.

ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ಡಾ.ಟಿ.ರುದ್ರಮುನಿ ಅವರು, ಈರುಳ್ಳಿ ಬೆಳೆಯಲ್ಲಿ ಬರುವ ಪ್ರಮುಖ ಕೀಟಗಳಾದ ಥ್ರೀಪ್ಸ್, ನುಸಿ, ತಂಬಾಕಿನ ಹುಳು ಹಾಗೂ ಪ್ರಮುಖ ರೋಗಗಳಾದ ನೇರಳೆ ಮಚ್ಚೆ ರೋಗ, ದುಂಡಾಣು ಗೆಡ್ಡೆಕೊಳೆ ರೋಗಗಳಸಮಗ್ರ ನಿರ್ವಹಣೆ ಕ್ರಮಗಳು ಕುರಿತು ಮಾಹಿತಿ ನೀಡಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ