Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹದವಾದ ಮಳೆಗೆ ಗರಿಗೆದರಿದ ಕೃಷಿ ಚಟುವಟಿಕೆ




 ಕೊಟ್ಟೂರು : ತಾಲೂಕು ವ್ಯಾಪ್ತಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ  ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಸತತ ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಇಳೆಗೆ ವರುಣದೇವ ಬಿಟ್ಟುಬಿಡದೆ ತಂಪೆರೆಯುತ್ತಿದ್ದಾನೆ  ಕೊಟ್ಟೂರು ತಾಲೂಕು  ಮಳೆಯಾಶ್ರಿತ  ಕೃಷಿ ಪ್ರದೇಶವಾಗಿದ್ದು ಇಲ್ಲಿನ ಬಹುತೇಕ ರೈತರು ಮಳೆಯನ್ನೇ ನಂಬಿ ಕೂತಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ 32,000 ಹೆಕ್ಟರ್ ಭೂಮಿಯಲ್ಲಿ ಇದೀಗ ಬಿತ್ತನೆಗೆ ರೈತರು ಅಣಿಯಾಗಿದ್ದಾರೆ. ಜೋಳ ಹಾಗೂ 

 ಸೂರ್ಯಕಾಂತಿ ಬೆಳೆಗಳ ಬಿತ್ತನೆಗೆ  ಸಕಾಲವಾಗಿದ್ದು, ಈಗಾಗಲೇ ರೈತರು ಭೂಮಿಯನ್ನು ಹಸನು  ಮಾಡಿಕೊಂಡಿದ್ದಾರೆ. ಹಾಗೂ ಬಿತ್ತನೆ ಬೀಜ ಗೊಬ್ಬರ ಇನ್ನಿತರ ಕೃಷಿ ಪರಿಕರ ಚಟುವಟಿಕೆಗಳಿಗೆ ರೈತ ಸಂಪರ್ಕ ಕೇಂದ್ರಗಳಿಗೆ  ದಾಂಗುಡಿ ಇಡುತ್ತಿದ್ದಾರೆ. ಇದೇ ವೇಳೆ ಕೃಷಿ ಅಧಿಕಾರಿಗಳ ತಂಡ ಜಾಗೃತಿ ವಹಿಸಿದ್ದು ರೈತರು ಯಾವುದೇ ಮಧ್ಯವರ್ತಿಗಳ ಸಂಪರ್ಕ ಮಾಡದೆ ಹಾಗೂ ನಕಲಿ ಬೀಜಗಳ ಮೊರೆ ಹೋಗದೆ ಅಧಿಕೃತ ಡೀಲರ್ ಹಾಗೂ ರೈತ ಸಂಪರ್ಕ ಕೇಂದ್ರಗಳ ಅಧಿಕಾರಿಗಳನ್ನು ಸಂಪರ್ಕಿಸಿ ರಿಯಾಯಿತಿ ದರದಲ್ಲಿ ಖರೀದಿಸಲು ಸಲಹೆ ನೀಡಿದ್ದಾರೆ. ಸೋಮವಾರ ರಾತ್ರಿಯಿಂದ ಸುರಿದ ಮಳೆಗೆ ತಾಲೂಕಿನ ಕೊಗಳಿ ಹೋಬಳಿಯಲ್ಲಿ ಗರಿಷ್ಠ 50.3 ಮಿ. ಮಿ ಮಳೆಯಾದ ವರದಿಯಾಗಿದೆ. ಕೊಟ್ಟೂರಿನಲ್ಲಿ 16.8 ಮಿ. ಮೀ ಮಳೆಯಾಗಿದ್ದು ರೈತರು ಕೃಷಿ ಚಟುವಟಿಕೆಯಲ್ಲಿ ಚುರುಕಾಗಿದ್ದಾರೆ.

 ಕೊಟ್ಟೂರು ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ಬಿತ್ತನೆ ಬೀಜಗಳ ದಾಸ್ತಾನಿದ್ದು ರೈತರು ತಮ್ಮ ದಾಖಲಾತಿಗಳನ್ನು ನೀಡಿ ಬಾರ್ ಕೋಡ್ ಸ್ಕ್ಯಾನರ್ ಮುಖಾಂತರ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸ ಬಹುದಾಗಿದೆ.

 ಸುನಿಲ್ ಕುಮಾರ್ ಸಹಾಯಕ ಕೃಷಿ ನಿರ್ದೇಶಕ 






Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ