Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕಿನಾದ್ಯಂತ ಜಿಟಿಜಿಟಿ ಮಳೆ, ಬಿತ್ತನೆ ಕಾರ್ಯಕ್ಕೆ ಅಡ್ಡಿ:

ಸಿರುಗುಪ್ಪ.ಜೂ.12:- ತಾಲೂಕಿನಲ್ಲಿ ಜನವರಿಯಿಂದ ಜೂನ್ ವರೆಗೆ 155.6 ಮಿ.ಮೀ. ಮಳೆ ಬರಬೇಕಾಗಿತ್ತು, ಆದರೆ 93.9ಮಿ.ಮೀ. ಮಳೆ ಬಂದಿದ್ದು, ಶೇ.34ರಷ್ಟು ಮಳೆ ಕಡಿಮೆಯಾಗಿದೆ. ಕಳೆದ ಮೂರು ದಿನಗಳಿಂದ ತಾಲೂಕಿನಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳವಾರ ಮತ್ತು ಬುಧವಾರ ಅಲ್ಲಲ್ಲಿ ಮಳೆಯಾಗಿದ್ದು, ಬುಧವಾರ ಬೆಳಗಿನಿಂದ ತಾಲೂಕಿನ ಕೆಲವು ಬಾಗಗಳಲ್ಲಿ ತುಂತುರು ಮಳೆ ಸುರಿದರೆ ಕೆಲವು ಭಾಗಗಳಲ್ಲಿ ಜೋರಾದ ಮಳೆ ಸುರಿದಿದೆ. ಇದರಿಂದಾಗಿ ರೈತರು ಬೆಳೆದ ಬೆಳೆಗಳು ಬೆಳೆಯಲು ಅನುಕೂಲವಾಗಿದೆ. ಇಲ್ಲಿಯವರೆಗೆ ತಾಲೂಕಿನಲ್ಲಿ 180 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ, 80-90 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆ ಬಿತ್ತನೆಯಾಗಿದ್ದು, ಕೆಲವು ಕಡೆ ಭಾನುವಾರವೂ ರೈತರು ಹತ್ತಿ ಮತ್ತು ಸೂರ್ಯಕಾಂತಿ, ಸಜ್ಜೆ ಬೆಳೆಯ ಬೀಜವನ್ನು ನಾಟಿ ಮಾಡುವ ಕಾರ್ಯದಲ್ಲಿ ತೊಡಗಿರುವುದು ಕಂಡು ಬಂತು. ಆದರೆ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ರೈತರಿಗೆ ಬಿತ್ತನೆ ಮಾಡಲು ಸಾಧ್ಯವಾಗಿರುವುದಿಲ್ಲ.
ಕೃಷಿ ಇಲಾಖೆಯ ಪ್ರಕಾರ 155.6ಮಿ.ಮೀ. ಮಳೆಯಾಗಬೇಕಾಗಿತ್ತು, ಆದರೆ 93.9ಮಿ.ಮೀ. ಮಳೆಯಾಗಿದ್ದು, ಶೇ.34ರಷ್ಟು ಮಳೆಯ ಕೊರತೆ ಉಂಟಾಗಿದೆ. ಮಳೆ ಕೊರತೆ ನಡುವೆಯೂ ರೈತರು ವಿವಿಧ ಬೆಳೆಗಳನ್ನು ಬೆಳೆಯಲು ಬೇಕಾದ ಬೀಜಗಳನ್ನು ಸಂಗ್ರಹ ಮಾಡಿಟ್ಟುಕೊಂಡಿದ್ದು, ಮಳೆ ಬಿಡುವು ಕೊಟ್ಟರೆ ಬೀಜ ಬಿತ್ತನೆ ಕಾರ್ಯ ತಾಲೂಕಿನಾದ್ಯಂತ ಜೋರಾಗಿ ನಡೆಯಲಿದೆ.
ನಗರದಲ್ಲಿ ಬೆಳಗಿನ ಜಾವದಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಶಾಲೆಗೆ ತೆರಳುವ ಮಕ್ಕಳು ಮತ್ತು ಸರ್ಕಾರಿ ಕಛೇರಿಗಳಿಗೆ ಬರುವ ಅಧಿಕಾರಿಗಳಿಗೆ ಹಾಗೂ ಬೀದಿ ಬದಿಯಲ್ಲಿ ಹೂ, ಹಣ್ಣು, ತರಕಾರಿ ಮಾರಾಟ ಮಾಡುವ ವ್ಯಾಪಾರಿಗಳಿಗೂ ಅನಾನುಕೂಲವಾಗಿತ್ತು.
ತಾಲೂಕಿನಾದ್ಯಂತ ಮಳೆ ಸುರಿದಿದ್ದು, ಸಿರುಗುಪ್ಪ 18.0, ತೆಕ್ಕಲಕೋಟೆ 12.8, ಸಿರಿಗೇರಿ 13.1, ಎಂ.ಸೂಗೂರು 9.2, ಹಚ್ಚೊಳ್ಳಿ 16.4, ರಾವಿಹಾಳು 34.2, ಕರೂರು 22.4, ಕೆ.ಬೆಳಗಲ್ಲು 22.4 ಮಿ.ಮೀ. ಮಳೆಯಾಗಿದೆ ಎಂದು ತಾಲೂಕು ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ