Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರು ತೋಟಗಾರಿಕೆ ಬೆಳೆಗಳಿಗೆ ವಿಮಾ ನೊಂದಾಯಿಸಲು ಅವಕಾಶ.

ವಿಜಯನಗರ(ಹೊಸಪೇಟೆ), ಜು.02: 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯನ್ನು ಜಿಲ್ಲೆಯಲ್ಲಿ ಆಯ್ಕೆ ಮಾಡಲಾಗಿದ್ದು, ತೋಟಗಾರಿಕೆ ಬೆಳೆಗಾರರು ತಮ್ಮ ಬೆಳೆಗಳಿಗೆ ವಿಮೆ ನೊಂದಾಯಿಸಿಕೊಳ್ಳಲು ಗ್ರಾಮ ಓನ್ ಮತ್ತು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಜುಲೈ 31ರೊಳಗೆ ಅರ್ಜಿಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಎಮ್.ರಮೇಶ ತಿಳಿಸಿದ್ದಾರೆ.
ತೋಟಗಾರಿಕೆ ಬೆಳೆಗಳಾದ ದಾಳಿಂಬೆ ಹಾಗೂ ಹಸಿ ಮೆಣಿಸಿನಕಾಯಿ ಬೆಳೆಗಳಿಗೆÀ ಬೆಳೆ ವಿಮೆ ಮಾಡಿಸಬಹುದಾಗಿದೆ. ವಿಮಾ ಮೊತ್ತ ಮತ್ತು ರೈತರ ವಿಮಾ ಕಂತಿನ ವಿವರ : ಪ್ರತಿ ಹೆಕ್ಟೇರ್‌ಗೆ ದಾಳಿಂಬೆ ವಿಮಾ ಮೊತ್ತ ರೂ.1,27,000 ರೈತರ ವಿಮಾ ಕಂತು ಶೇ.5 ರಂತೆ 6,350 ಹಾಗೂ ಹಸಿ ಮೆಣಸಿನಕಾಯಿ ಬೆಳೆ ವಿಮಾ ಮೊತ್ತ ರೂ.71,000 ರೈತರ ವಿಮಾ ಕಂತು ಶೇ.5 ರಂತೆ 3,550 ಆಗಿದೆ. ಬೆಳೆ ವಿಮಾ ಮೊತ್ತವು ಬೆಳೆ ಸಾಲ ಪಡೆಯುವ ಮತ್ತು ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ, ಬೆಳೆ ವಿಮಾ ಮೊತ್ತವನ್ನು ಪಾವತಿಸಲು ಹತ್ತಿರದ ರಾಷ್ಟಿçÃಕೃತ ಬ್ಯಾಂಕ್ ಶಾಖೆಗಳಲ್ಲಿ ಸಹಕಾರಿ ಸಂಘಗಳನ್ನು ಮತ್ತು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ.
ಅಗತ್ಯ ದಾಖಲಾತಿ ವಿವರ : ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ ಸಂಖ್ಯೆ ಹಾಗೂ ಸ್ವಯಂ ಘೋಷಿತ ಬೆಳೆ ವಿವರಗಳನ್ನು ನೀಡತಕ್ಕದ್ದು. ಕಂಪನಿಯ ಪ್ರತಿನಿಧಿಯನ್ನು ಸಂಪರ್ಕಿಸಲು ಮೊ.7406490045 ಗೆ ಕರೆ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಹೊಸಪೇಟೆ ಮೊ.9164297220, ಮರಿಯಮ್ಮನಹಳ್ಳಿ ಮೊ.7204888978, ಕಮಲಾಪುರ ಮೊ.8123465548 ಹಾಗೂ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಹೊಸಪೇಟೆ ಮೊ.8310291867 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ