Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜು, 15: ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆರೋಗದಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಆದೇಶದನ್ವಯ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ ಫಾರ್ಮಸಿ ಅಧಿಕಾರಿಗಳ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳ ಒಟ್ಟು 18 ಹುದ್ದೆಗಳಿದ್ದು, ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಡಿಪ್ಲೋಮಾ ಇನ್ ಲ್ಯಾಬೋರೇಟರಿ ತಾಂತ್ರಿಕ ವಿದ್ಯಾರ್ಹತೆ ಪಡೆದಿರಬೇಕು.
ಫಾರ್ಮಸಿ ಅಧಿಕಾರಿಗಳು : ಒಟ್ಟು 24 ಹುದ್ದೆಗಳಿದ್ದು, ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಡಿ.ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಕರ್ನಾಟಕ ಫಾರ್ಮಸಿ ಕೌನ್ಸಿಲಿಂಗ್‌ನಲ್ಲಿ ನೋಂದಣಿಯಾಗಿರಬೇಕು.
ಅರ್ಹ ಅಭ್ಯರ್ಥಿಗಳು ದಿನಾಂಕ 16-07-2026 ರ ಬೆಳಿಗ್ಗೆ 10:30 ರಿಂದ ದಿನಾಂಕ 25-07-2026 ರ ಸಂಜೆ 5:30 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಈ ಎರಡು ಹುದ್ದೆಗಳಿಗೆ ಸಂಬಂಧಪಟ್ಟ ಅರ್ಜಿ ನಮೂನೆಯನ್ನು ಕಚೇರಿ ಅವಧಿಯಲ್ಲಿ 'ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗ' ಇಲ್ಲಿ ಪಡೆದುಕೊಳ್ಳಲು ಸೂಚಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-222382 ಅಥವಾ ಇಮೇಲ್ ಐಡಿ: [email protected] ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್* *ಆಗಸ್ಟ್ 6 ರವರೆಗೆ ಸಲಹೆ ಸೂಚನೆಗಳನ್ನು ‌ನೀಡಲು ಅವಕಾಶ* *ನನ್ನ ಹೆಸರನ್ನೇ ನೋಟಿಸ್ ಬೋರ್ಡ್ ನಲ್ಲಿ ಹಾಕಿದ್ದರು* *ಎಸ್ ಟಿಪಿ, ಕುಡಿಯುವ ನೀರಿನ ಬಗ್ಗೆ ಗಮನ ಹರಿಸಿ* *ಹೈ ರೈಸ್ ಕಟ್ಟಡಗಳ ನಿರ್ಮಾಣಕ್ಕೆ ಒತ್ತು* *ಬೆಂಗಳೂರು ಭಾರತದ ಹೃದಯ*ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಡಾ.ಯಲ್ಲಾ ರಮೇಶ್‌ಬಾಬು ಕರೆ ಜನಸಂಖ್ಯೆ ಸ್ಥಿರತೆಗೆ ಸಮುದಾಯದ ಪಾತ್ರ ಮುಖ್ಯಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 14 ರವರೆಗೆ 6,71,803 ಗಣತಿ ನಮೂನೆಗಳ ಡಿಜಿಟಲೀಕರಣಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನಜುಲೈ 13 ರಂದು ಬಳ್ಳಾರಿಯ ವಿವಿಧೆಡೆ ವಿದ್ಯುತ್ ಕಡಿತಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ: ಬಳ್ಳಾರಿ ಜಿಲ್ಲೆಯಲ್ಲಿ ಶೇ. 97.26 ರಷ್ಟು ಎಸ್.ಐ.ಆರ್ ಗಣತಿ ನಮೂನೆ ವಿತರಣೆ, ಮನೆ ಮನೆ ಸಮೀಕ್ಷೆ ಚುರುಕುಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ ವಾಹನಗಳ ಹರಾಜುಕ್ಷಯಮುಕ್ತ ಬಳ್ಳಾರಿ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈಜೋಡಿಸಿ