Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಇಲಾಖೆ; ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ,ಜು.24



ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೇಂದ್ರ ಪುರಸ್ಕೃತ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ತಾಳೆಬೆಳೆ ಬೆಳೆಯಲು ಆಸಕ್ತಿ ಇರುವ ರೈತರಿಂದ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.

ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಪ್ರತೀ ಹೆಕ್ಟೇರ್‌ಗೆ ಶೇ.೫೦ ರಂತೆ ರೂ.೨೯ ಸಾವಿರ, ಮೊದಲನೇ ವರ್ಷದಿಂದ ನಾಲ್ಕು ವರ್ಷಗಳ ಬೇಸಾಯ ನಿರ್ವಹಣೆ ಕಾರ್ಯಕ್ರಮಕ್ಕೆ ಪ್ರತೀ ವರ್ಷ ನಿರ್ವಹಣೆಗೆ ರೂ.೫೨೫೦ ರಂತೆ ಪ್ರತೀ ಹೆಕ್ಟೇರ್‌ಗೆ ಸಹಾಯಧನ ನೀಡಲಾಗುವುದು.

ಅಂತರ ಬೆಳೆಗೆ ರೂ.೫೨೫೦, ಎತ್ತರವಾದ ತಾಳೆ ಮರಗಳಿಂದ ಹಣ್ಣು ಕಟಾವು ಮಾಡಲು ರೂ.೧ ಸಾವಿರ ಪ್ರತೀ ಟನ್‌ಗೆ (ಗರಿಷ್ಠ ೬೦ ಟನ್ ಮಾತ್ರ) ಸಹಾಯಧನ, ಡೀಸೆಲ್ ಪಂಪ್ ಸೆಟ್ ಕೊಳ್ಳಲು ರೂ.೮ ಸಾವಿರ, ಕೊಳವೆ ಬಾವಿಗೆ ರೂ.೫೦ ಸಾವಿರ ಸಹಾಯಧನ, ತಾಳೆ ಹಣ್ಣು ಕಟಾವು ಮಾಡುವ ಉಪಕರಣ, ಮೊಟೊರೈಸ್ಡ್ ಚಿಸೆಲ್ ರೂ.೧೫ ಸಾವಿರ, ತಾಳೆ ಹಣ್ಣು ಕಟಾವು ಏಣಿ ರೂ.೫ ಸಾವಿರ, ಚಾಫ್ ಕಟ್ಟರ್ ರೂ.೫೦ ಸಾವಿರ, ಟ್ರಾಕ್ಟರ್ ಟ್ರೋಲಿ ಖರೀದಿಸಲು ರೂ.೧,೬೦,೦೦೦ (ಶೇ.೫೦ ರಂತೆ) ಸಹಾಯಧನ ಸೌಲಭ್ಯ ನೀಡಲಾಗುವುದು.

ಈ ಯೋಜನೆಯಡಿ ಅಲ್ಪಸಂಖ್ಯಾತರಿಗೆ ಶೇ.೧೫, ವಿಕಲಾಂಗಚೇತನರಿಗೆ ಶೇ.೫ ಮತ್ತು ರೈತ ಮಹಿಳೆಯರಿಗೆ ಶೇ.೩೩ ರಷ್ಟು ಅನುದಾನ ಮೀಸಲಿರಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸಹಾಯಧನ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಮತ್ತು ತೋಟಗಾರಿಕೆ ಉಪನಿರ್ದೇಶಕರ ಕಾರ್ಯಾಲಯ ಅಥವಾ ದೂ.೦೮೩೯೨-೨೭೮೧೭೯ ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ