ರಾಯಚೂರು ಆಗಸ್ಟ್ 12ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿ ಸಾರ್ವಜನಿಕ ಹಿತದೃಷ್ಠಿಯಿಂದ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರು-01 ಹುದ್ದೆ (ಮೆರಿಟ್ ಆಧಾರಿತ) ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸ್ವ-ಹಸ್ತಾಕ್ಷರದಿಂದ ಭರ್ತಿಮಾಡಿ ಅರ್ಜಿಯನ್ನು ಸಲ್ಲಿಸತಕ್ಕದ್ದು, ಹಾಗೂ ಹುದ್ದೆಗೆ ಸಂಬAದಿಸಿದ ಎಲ್ಲಾ ದೃಡೀಕೃತ ದಾಖಲಾತಿಗಳು ಹಾಗೂ ಭಾವಚಿತ್ರದೊಂದಿಗೆ ದಿನಾಂಕ: 19/08/2026ರ ಸಾಯಂಕಾಲ 5:30ರ ಒಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಲಯ ವಿಭಾಗ ರಾಯಚೂರು ಇಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8151896578ಗೆ ಸಂಪರ್ಕಿಸುವAತೆ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಲಯ ವಿಭಾಗಕ್ಕೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ರಾಯಚೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
