Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇ-ಸ್ವತ್ತು ತಂತ್ರಾಂಶ: ಸಹಾಯವಾಣಿ ಕಾರ್ಯಕ್ಕೆ ಅಧಿಕಾರಿಗಳ ನಿಯೋಜನೆ



ಕೊಪ್ಪಳ ಡಿಸೆಂಬರ್ 05 ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅನುಷ್ಠಾನ ಮಾಡಿರುವುದರಿಂದ ಪ್ರಾರಂಭದಲ್ಲಿ ಸಾರ್ವಜನಿಕರ ಕರೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿ ವತಿಯಿಂದ ಸಹಾಯವಾಣಿ ಪ್ರಾರಂಭಿಸಿದ್ದು, ಇ-ಸ್ವತ್ತು ತಂತ್ರಾಂಶ ಹಾಗೂ ನಿಯಮಗಳನ್ವಯ ಉತ್ತರಿಸುವ ಬಗ್ಗೆ, ಮಾರ್ಗದರ್ಶನ ನೀಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನಿಯೋಜಿಸಿ ಆದೇಶಿಸಲಾಗಿದೆ.

ಜಿಲ್ಲಾ ಪಂಚಾಯತಿಯ ಆದೇಶದನ್ವಯ ಕುಷ್ಟಗಿ ತಾಲ್ಲೂಕಿನ ಹನುಮನಾಳ ಗ್ರಾಮ ಪಂಚಾಯತಿ ಪಿಡಿಒ ಪ್ರಶಾಂತ್ ಹಿರೇಮಠ್ ಅವರು ಡಿಸೆಂಬರ್ 5, ಡಿ.10, ಡಿ.16, ಡಿ.20 ಹಾಗೂ ಡಿ.26 ರಂದು, ಕುಕನೂರು ತಾಲ್ಲೂಕಿನ ಭಾನಾಪುರ ಗ್ರಾಮ ಪಂಚಾಯತಿ ಪಿಡಿಒ ರಮೇಶ್ ತಿಮ್ಮಾರೆಡ್ಡಿ ಅವರು ಡಿ.6, ಡಿ.11, ಡಿ.17, ಡಿ.22 ಹಾಗೂ ಡಿ.29 ರಂದು, ಗಂಗಾವತಿ ತಾಲ್ಲೂಕಿನ ಕೇಸರಹಟ್ಟಿ ಗ್ರಾಮ ಪಂಚಾಯತಿ ಪಿಡಿಒ ಶಂಶೀರ್ ಅಲಿ ಅವರು ಡಿ.8, ಡಿ.12, ಡಿ.18, ಡಿ.23 ಹಾಗೂ ಡಿ.30 ರಂದು ಮತ್ತು ಯಲಬುರ್ಗಾ ತಾಲ್ಲೂಕಿನ ಬೇವೂರು ಗ್ರಾಮ ಪಂಚಾಯತಿ ಪಿಡಿಒ ಅಬ್ದುಲ್ ಗಫರ್ ಅವರು ಡಿ.9, ಡಿ.15, ಡಿ.19, ಡಿ.24 ಹಾಗೂ ಡಿ.31 ರಂದು ಜಿಲ್ಲಾ ಪಂಚಾಯತಿ ಕಾರ್ಯಾಲಯಕ್ಕೆ ಹಾಜರಾಗಿ ಬೆಳಿಗ್ಗೆ 9 ಗಂಟೆಯಿ0ದ ಸಂಜೆ 6 ಗಂಟೆಯವರೆಗೆ ಕರ್ತವ್ಯ ನಿರ್ವಹಿಸಬೇಕು.

ಸಹಾಯವಾಣಿ ಸಂಖ್ಯೆ:08539221207 ಆಗಿದ್ದು, ಸಾರ್ವಜನಿಕರು 2 ಮತ್ತು 4ನೇ ಶನಿವಾರ, ಭಾನುವಾರ ಹಾಗೂ ರಜೆ ದಿನಗಳನ್ನು ಹೊರತುಪಡಿಸಿ ಮೇಲೆ ತಿಳಿಸಿದ ದಿನಾಂಕಗಳಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಕಚೇರಿ ಅವಧಿಯಲ್ಲಿ ಸಹಾಯವಾಣಿಗೆ ಸಂಪರ್ಕಿಸಿ ನಿಯೋಜಿತ ಅಧಿಕಾರಿಗಳಿಂದ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಪಂಚಾಯತ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ